News Karnataka Kannada
Saturday, April 27 2024
ಬಳ್ಳಾರಿ

ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ: ಇಬ್ಬರು ಸಾವು, 6 ಜನರಿಗೆ ಗಂಭೀರ ಗಾಯ

Four killed in accident between truck and car
Photo Credit :

ಬಳ್ಳಾರಿ : ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಸಂಡೂರು ತಾಲೂಕಿನ ವಡ್ಡು ಗ್ರಾಮದ ಹತ್ತಿರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಆಟೋ ಹಾಗೂ ಜೀಪ್ ಪರಸ್ಪರ ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ತೆರೆದ ಹೊಂಡದಲ್ಲಿ ಬಿದ್ದಿದೆ. ಹೀಗಾಗಿ ಜೀಪ್ ನಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ವಡ್ಡು ಗ್ರಾಮದ ಅಗಸರ ಅಳ್ಳಪ್ಪ(68) ಹಾಗೂ ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುರ್ಜಿತ್ ಸಿಂಗ್ (51) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಆಟೋದಲ್ಲಿದ್ದ ಐವರು ಗಾಯಗೊಂಡಿದ್ದು ಅವರನ್ನು ಬಳ್ಳಾರಿಯ ವಿಮ್ಸ್ ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹೊಂಡದಿಂದ ಚಾಲಕ, ಮತ್ತೊಬ್ಬರನ್ನು ಹೊರ ತೆಗೆದು ಉಳಿಸಿಕೊಳ್ಳಲು ಪ್ರಯತ್ನಪಟ್ಟರು. ಆದರೆ, ಅವರ ಪ್ರಯತ್ನ ವಿಫಲವಾಯಿತು. ಜೀಪ್ ನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ತೋರಣಗಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು