ಬಳ್ಳಾರಿ : ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಬಳ್ಳಾರಿ ಜಿಲ್ಲೆಯಲ್ಲಿ ಅಂಗನವಾಡಿ, ನರ್ಸರಿ, ಫ್ರಿ ನರ್ಸರಿ, 1-8 ನೇ ತರಗತಿವರೆಗಿನ ಶಾಲೆಗಳು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಂದಾಲ್ ಸುತ್ತಮುತ್ತ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ. ತೋರಣಗಲ್ಲು, ಸುಲ್ತಾನ್ ಪುರ, ಜಿಂದಾಲ್ ಟೌನ್ಶಿಪ್, ತಾರಾ ನಗರ, ಕುರೇಕೊಪ್ಪಾ, ಕುಡುತಿನಿ ಶಾಲೆಗಳು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯಾಧ್ಯಂತ 21,390 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,95,047 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯದಲ್ಲಿ 21,390 ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದೆ.