News Karnataka Kannada
Saturday, May 04 2024
ಬಳ್ಳಾರಿ

ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಸೀಜ್‌ : ಬರೋಬ್ಬರಿ 5 ಕೋಟಿ 60 ಲಕ್ಷ ಖಾಕಿ ವಶ

ಲೋಕಸಭಾ ಚುನಾವಣೆ ಹಿನ್ನಲೆ, ಪ್ರಚಾರದ ಬಿರುಸು ಜೋರಾಗಿರುವ ಈ ವೇಳೆಯನ್ನು ಅವಕಾಶವಾಗಿಟ್ಟುಕೊಂಡು ಜಿಲ್ಲೆಯಲ್ಲಿ ದಾಖಲೆ ರಹಿತ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿದೆ.
Photo Credit : NewsKarnataka

ಬಳ್ಳಾರಿ:   ಲೋಕಸಭಾ ಚುನಾವಣೆ ಹಿನ್ನಲೆ, ಪ್ರಚಾರದ ಬಿರುಸು ಜೋರಾಗಿರುವ ಈ ವೇಳೆಯನ್ನು ಅವಕಾಶವಾಗಿಟ್ಟುಕೊಂಡು ಜಿಲ್ಲೆಯಲ್ಲಿ ದಾಖಲೆ ರಹಿತ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿದೆ. ಇದೀಗ ಚುನಾವಣೆ ಅಧಿಕಾರಿಗಳು ಬರೋಬ್ಬರಿ 5 ಕೋಟಿ 60 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಲೆಕ್ಷನ್‌ಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನಲೆ ಪ್ರತಿ ಚೆಕ್‌ಪೋಸ್ಟ್‌ನಲ್ಲಿ ಬಿಗಿ ಭದ್ರತೆಯನ್ನು ಅಳವಡಿಸಲಾಗಿದೆ. ಹೀಗೆ ನಗರದ ಬ್ರೂಸ್ ಪೇಟೆ ಠಾಣೆ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೇ ಹಣವನ್ನ ಕಾರಿನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರು ಪರಿಶೀಲನೆ ವೇಳೆ ಕಂಬಳಿ ಬಜಾರ್​ನಲ್ಲಿರುವ ನರೇಶ್ ಗೋಲ್ಡ್ ಶಾಪ್ ಮನೆಯೊಂದರಲ್ಲಿದ್ದ 5.60 ಕೋಟಿ ರೂಪಾಯಿ. 1 ಕೆಜಿ ಚಿನ್ನ, 68 ಕೆಜಿ ಗಟ್ಟಿ ಬೆಳ್ಳಿ ಪತ್ತೆಯಾಗಿವೆ. ಬಳ್ಳಾರಿ ಡಿವೈಎಸ್ಪಿ, ಬ್ರೂಸ್ ಪೇಟೆ ಸಿಪಿಐ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಸ್ಥಳಕ್ಕೆ ಖುದ್ದಾಗಿ ಎಸ್ಪಿ ರಂಜಿತ್ ಕುಮಾರ್ ಅವರು ಭೇಟಿ ನೀಡಿ‌ ಪರಿಶೀಲ‌ನೆ ನಡೆಸಿದ್ದಾರೆ. ಈ ಹಣದ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ವಶಪಡಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು