ಬಳ್ಳಾರಿ: ಜಿಲ್ಲೆಯ ಕುರಗೋಡು ತಾಲೂಕಿನ ದಮ್ಮೂರಿನ ಗ್ರಾ.ಪಂ.ಸಮುದಾಯ ಭವನದಲ್ಲಿ ದಮ್ಮೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ ಶಾಂತಿಯುತವಾಗಿ ನಡೆಯಿತು.
ಆರಂಭದಲ್ಲಿ ಬಿ.ನಾಗವೇಣಿ ದೇವರೆಡ್ಡಿ ಅವರು ಗ್ರಾ.ಪಂ.ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಅವರ ವಿರುದ್ಧ ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಚುನಾವಣಾಧಿಕಾರಿ ವಿ.ನಿರ್ಮಲಾ ಅವರು ನಾಗವೇಣಿ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ನಾಗವೇಣಿ, ಎಲ್ಲಾ ಗ್ರಾ.ಪಂ.ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು. ಇದಕ್ಕಾಗಿ ಎಲ್ಲರ ಸಹಕಾರ ಅತ್ಯಗತ್ಯ ಎಂದರು.