ಬಳ್ಳಾರಿ: ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷರಾಗಿ ಕುರುಗೋಡಿನ ಚಾನಾಳ್ ಅಮರೇಶಪ್ಪ ಆಯ್ಕೆಯಾಗಿದ್ದು, ಜಿಲ್ಲಾಧ್ಯಕ್ಷ ಸಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ.
ಅಧ್ಯಕ್ಷ ಚನಾಳ ಅಮರೇಶಪ್ಪ ಮಾತನಾಡಿ, ಆಧುನಿಕತೆಯ ಯುಗದಲ್ಲಿ ಜನಪದ ಕಲೆಯನ್ನು ಮರೆಯುತ್ತಿದ್ದಾರೆ. ಜನಪದ ಕತೆ, ಹಾಡು, ಆಟ ಅವಸಾನದ ಅಂಚಿನಲ್ಲಿದ್ದು, ಕರ್ನಾಟಕದ ವಿವಿಧ ಮೂಲೆಗಳಲ್ಲಿ ಅಡಗಿರುವ ಜನಪದ ಸಾಹಿತ್ಯ ಕಲೆಗಳನ್ನು ಗುರುತಿಸಿ ಬೆಳಕಿಗೆ ತರುವ ಜವಾಬ್ದಾರಿ ಎಲ್ಲರ ಮೇಲಿದೆ.
ಈ ಕೆಲಸವನ್ನು ಪರಿಚಿತ ಕಲಾವಿದರು ಮಾಡಿ ಇಂದಿನ ಮಕ್ಕಳಿಗೆ, ಯುವಕರಿಗೆ ಪರಿಚಯಿಸುವ ಅಗತ್ಯವಿದೆ. ಈ ಒಂದು ಕಾರ್ಯಕ್ಕಾಗಿ ನನ್ನನ್ನು ಗುರುತಿಸಿ ತಾಲೂಕು ಅಧ್ಯಕ್ಷರನ್ನಾಗಿ ನೇಮಿಸಿದ ರಾಜ್ಯಾದ್ಯಂತ ಕರ್ನಾಟಕ ಜಾನಪದ ಪರಿಷತ್ತಿನ ಪ್ರತಿನಿಧಿಗಳಿಗೆ ನಾನು ಆಭಾರಿಯಾಗಿದ್ದೇನೆ ಎಂದರು.