Categories: ಬಳ್ಳಾರಿ

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ

ಬಳ್ಳಾರಿ: ಲೋಕಸಭಾ ಚುನಾವಣೆ ಸಮಯದಲ್ಲಿ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿಯ ಉಡುಗೊರೆ ಕೊಟ್ಟು ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಬಳ್ಳಾರಿ ಪಾಲಿಕೆ ಮೇಯರ್‌, ಉಪಮೇಯರ್ ಚುನಾವಣೆ ಕಸರತ್ತು ನಡೆಸುತ್ತಿದ್ದು, ಮೇಯರ್ ಆಕಾಂಕ್ಷಿಗಳು ಭರ್ಜರಿ ಉಡುಗೊರೆ ನೀಡಿದ್ದಾರೆ.

ಮಾರ್ಚ್ 28ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ. ಬಹುಮತ ಇದ್ದರೂ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಇದೀಗ ಗಿಫ್ಟ್ ಕೊಟ್ಟು ಜನರನ್ನು ಸೆಳೆಯುತ್ತಿದ್ದಾರೆ. ಮುಲ್ಲಂಗಿ ನಂದೀಶ್, ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ ಸದಸ್ಯ ಪ್ರಭಂಜನ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಇದರಲ್ಲಿ ಮುಲ್ಲಂಗಿ‌ ನಂದೀಶ್ ಮತ್ತು ಪಕ್ಷೇತರ ಸದಸ್ಯ ಪ್ರಭಂಜನ್ ಮಧ್ಯೆ ತೀವ್ರ ಪೈಪೋಟಿಗಿಳಿದು ಗಿಫ್ಟ್ ನೀಡುತ್ತಿದ್ದಾರೆ.

ಮುಲ್ಲಂಗಿ ನಂದೀಶ್ ಬೆಳ್ಳಿ ತಟ್ಟೆ ಮತ್ತು ಕಾಂಗ್ರೆಸ್ ಸಿಂಬಲ್ ಇರುವ ಬಂಗಾರದ ಚಿಕ್ಕ ಆಭರಣ ನೀಡಿದರೆ, ಪಕ್ಷೇತರ ಸದಸ್ಯ ಪ್ರಭಂಜನ್ ರೇಷ್ಮೆ ಪಂಚೆ ಮತ್ತು ಸೀರೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಇತರೆ ಇಬ್ಬರು ಡ್ರೈಪ್ರೂಟ್ಸ್ ಬಾಕ್ಸ್ ನೀಡಿದ್ದಾರೆ. ಜೊತೆಗೆ ಸದಸ್ಯರ ಮನೆ ಮನೆಗೆ ಹೋಗಿ ಸನ್ಮಾನ ಮಾಡುತ್ತಿದ್ದಾರೆ. ಒಟ್ಟು 39 ಸದ್ಯರ ಪೈಕಿ 21 ಕಾಂಗ್ರೆಸ್, 5 ಪಕ್ಷೇತರರು ಮತ್ತು 13 ಬಿಜೆಪಿ ಸದಸ್ಯರಿದ್ದಾರೆ. ಇದರಲ್ಲಿ ಕೆಲವರು ಬಳ್ಳಾರಿ ಮಗರ ಶಾಸಕರ ಬೆಂಬಲಿಗರಾದರೆ, ಕೆಲವರು ಸಚಿವ ನಾಗೇಂದ್ರ ಬೆಂಬಲಿಗರಾಗಿದ್ದಾರೆ.

ಕಳೆದ ಚುನಾವಣೆಯಲ್ಲಿ ಸಹ ಸಚಿವ ನಾಗೇಂದ್ರ ಹಾಗೂ ನಗರ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವಣ ತೀವ್ರ ಪೈಪೋಟಿ ಏರ್ಪಟ್ಟಿತು. ಈಗಲೂ ಕೂಡ ಇಬ್ಬರ ಬೆಂಬಲಿಗರ ನಡುವೆ ಪೈಪೋಟಿ ಪಾಲಿಕೆ ಚುನಾವಣೆ ಸಾಕ್ಷಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Nisarga K

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago