ಬಳ್ಳಾರಿ: ನರೇಂದ್ರ ಮೋದಿ ಈ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಅವರಿಗೆ ಚುನಾವಣೆ ಗೆಲ್ಲುವ ವಿಶ್ವಾಸ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಹೇಳಿದರು.
ʼಆಕ್ಸಿಸ್ ಮೈ ಇಂಡಿಯಾ ಮಾಡಿದ ಸಮೀಕ್ಷೆಯ ಪ್ರಕಾರ ಬಿಜೆಪಿ ೨೦೦-೨೨೦ ಸೀಟು ಗೆಲ್ಲಬಹುದು ಎನ್ನಲಾಗಿತ್ತು. ಕೂಡಲೇ ನರೇಂದ್ರ ಮೋದಿ ಸರ್ಕಾರ ಅದನ್ನು ಡಿಲೀಟ್ ಮಾಡಿಸಿದರುʼ ಎಂದು ಆರೋಪಿಸಿದ ಸಿಎಂ, ಕಮಲ ಪಕ್ಷ ಕೇವಲ ೨೧೦ ಸೀಟುಗಳನ್ನು ಮಾತ್ರ ಗೆಲ್ಲುತ್ತದೆ ಎಂದು ತಿಳಿದರೆ ಜನ ತಮ್ಮ ಪಕ್ಷಕ್ಕೆ ಮತ ಹಾಕುವುದಿಲ್ಲ ಎನ್ನುವ ಭಯದಿಂದ ಹೀಗೆ ಮಾಡಿದರು ಎಂದರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ೪೦೦ ಸೀಟುಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸದಿಂದ ಹೇಳಿಕೊಳ್ಳುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ತಾವು ಅಧಿಕಾರಕ್ಕೆ ಬರುವುದಿಲ್ಲ ಎಂದು ಯಾವೆಲ್ಲ ಸಮೀಕ್ಷೆಗಳ ವರದಿ ಬಂದಿವೆಯೋ ಅವೆಲ್ಲವನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ.