ಬಳ್ಳಾರಿ: ಭಕ್ತರೆಲ್ಲಾ ಅಯೋಧ್ಯೆ ಪ್ರಭು ಶ್ರೀರಾಮರ ದರ್ಶಶನ ಪಡೆದು ಮರಳಿ ತಮ್ಮೂರಿಗೆ ವಾಪಾಸ್ಸಾಗುತ್ತಿದ್ದಾಗ, ಯಾತ್ರಿಕರಿದ್ದ ಬೋಗಿಗೆ ಮೂವರು ಅನ್ಯಕೋಮಿನ ಯುವಕರು ಹತ್ತಿ ಅವರೊಂದಿಗೆ ಕಾರಣವಿಲ್ಲದೆ ವಾಗ್ವಾದಕ್ಕಿಳಿದ್ದಾರೆ. ಮಾತಿನ ಭರದಲ್ಲಿ ಕಿಡಗೇಡಿಗಳು ಬೋಗಿಗೆ ಬೆಂಕಿ ಹಚ್ಚುವ ಧಮ್ಕಿ ಹಾಕಿದ ಘಟನೆ ನಡೆದಿದೆ.
ಸುಮಾರು 14,00 ಕ್ಕೂ ಹೆಚ್ಚು ಯಾತ್ರಿಕರು ಮೈಸೂರು- ಅಯೋಧ್ಯೆ ದಾಮಾ ರೈಲಿನಲ್ಲಿ ತಮ್ಮೂರಿಗೆ ಮರಳುತ್ತಿದ್ದಾಗ, ಮಾರ್ಗ ಮಧ್ಯೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಿಲ್ದಾಣದಲ್ಲಿ ರೈಲು ನಿಂತಿದ್ದು,ಅನ್ಯಕೋಮಿನ ಮೂವರು ಯುವಕರು ಬೋಗಿ ನಂ 2 ಅಯೋಧ್ಯೆ ಯಾತ್ರಿಕರಿಗೆ ಮೀಸಲು ಇರುವ ಬೋಗಿಯನ್ನ ಹತ್ತಲು ಮುಂದಾಗಿದ್ದಾರೆ, ಯಾತ್ರಿಕರು ಯುವಕರನ್ನ ತಡೆದು ಇದು ಅಯೋಧ್ಯೆ ಯಾತ್ರಿಕರಿಗೆ ಮೀಸಲು ಇರುವ ಬೋಗಿ ಇದರಲ್ಲಿ ತಾವು ಹತ್ತುವ ಹಾಗಿಲ್ಲ ಎಂದು ತಿಳಿ ಹೇಳಿದ್ದಾರೆ. ಆದರೆ ಆ ಯುವಕರು ಯಾತ್ರಿಕರ ಮಾತು ಕೇಳಿದೆ ಅವರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.
ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದಿದೆ. ರೈಲು ಏನು ನಿಮ್ಮ ಅಪ್ಪನ ಮನೆದಲ್ಲ. ಇದಕ್ಕೆ ಬೆಂಕಿ ಹಚ್ಚಿ ಸುಟ್ಟು ಬಿಡುತ್ತೇವೆ ಅಂತಾ ಅಂದಿದ್ದಾರಂತೆ. ಯಾತ್ರಿಕರು ತಕ್ಷಣ ರೈಲ್ವೆ ಪೊಲೀಸ್ರನ್ನ ಕರೆಸಿ ಅವರಿಗೆ ಯುವಕರನ್ನ ಒಪ್ಪಿಸಿದ್ದಾರೆ.
ಧಮ್ಕಿ ಹಾಕಿದ ಅನ್ಯಕೋಮಿನ ಯುವಕರನ್ನ ಬಂಧಿಸುವ ಕೆಲಸ ಮಾಡಬೇಕಿದ್ದ ರೈಲ್ವೆ ಪೋಲೀಸರು ಯಾತ್ರಿಕರ ಮುಂದೆ ಅವರನ್ನ ಬಿಟ್ಟು ಕಳಿಸಿದ್ದಾರೆ. ಇದನ್ನ ಗಮನಿಸಿದ ಯಾತ್ರಿಕರು ರೈಲ್ವೆ ಪೋಲಿಸರ ಮೇಲೆ ಆಕ್ರೋಶಗೊಂಡು ಅಯೋಧ್ಯೆ ರೈಲನ್ನು ಸ್ಟಾಪ್ ಮಾಡಿ ಒಂದು ಗಂಟೆಗಳ ಕಾಲ ನಿರಂತರ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಈ ವಿಷಯ ಎಲ್ಲೆಡೆ ಹರಡುತ್ತಿದ್ದಂತೆ ಹೊಸಪೇಟೆಯ ಸ್ಥಳೀಯ ಹಿಂದೂ ಕಾರ್ಯಕರ್ತರು, ಭಜರಂಗ ದಳ ಕಾರ್ಯಕರ್ತರು ರೈಲು ನಿಲ್ದಾಣಕ್ಕೆ ಆಗಮಿಸಿ ಹಿಂದೂ ಧ್ವಜ ಹಿಡಿದು ಪ್ರತಿಭಟನೆ ಮಾಡಿದ್ದಾರೆ.
ಜಯನಗರ ಜಿಲ್ಲೆ ಎಸ್ಪಿ ಶ್ರೀಹರಿಬಾಬು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದು, ಕಿಡಗೇಡಿಗಳ ಬಂಧಿಸುತ್ತೆವೆ. ಈ ಕೂಡಲೇ ಎಪ್ಐಆರ್ ಹಾಕುತ್ತೆವೆ ಎಂದು ಹೇಳಿದ್ದಾರೆ. ರೈಲು ಪ್ರಯಾಣ ಮುಂದುವರೆಯುವಂತೆ ಯಾತ್ರಿಕರ ಮನವೊಲಿಸುವಲ್ಲಿ ಯಶಸ್ವಿಯಾಗಿ ಅವರನ್ನ ಕಳಿಸಿದ್ದಾರೆ.