News Karnataka Kannada
Monday, May 06 2024
ಬೀದರ್

ಉತ್ತರ ಪ್ರದೇಶ ರಸ್ತೆ ಅಪಘಾತ: ಇಂದು ಅಪರಾಹ್ನ ಮೃತದೇಹ ಬೀದರ್ ಗೆ ರವಾನೆ

ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Photo Credit :

ಬೀದರ್: ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ನಿನ್ನೆ ಭಾನುವಾರ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 7 ಮಂದಿ ಕನ್ನಡಿಗರ ಮೃತದೇಹವನ್ನು ಇಂದು ಸೋಮವಾರ ಅಪರಾಹ್ನ ಬೀದರ್ ಜಿಲ್ಲೆಗೆ ರವಾನಿಸಲಾಗುತ್ತದೆ.

ಅಪರಾಹ್ನ 3 ಗಂಟೆ ಹೊತ್ತಿಗೆ ಮೃತದೇಹಗಳು ಬೀದರ್ ತಲುಪಲಿವೆ. ಬೆಳಗ್ಗೆ 10 ಗಂಟೆಗೆ ಲಖ್ನೌನಿಂದ ವಿಮಾನದಲ್ಲಿ ಮೃತದೇಹಗಳನ್ನು ರವಾನೆ ಮಾಡಲಾಗುತ್ತಿದ್ದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಹೈದರಾಬಾದ್ ವಿಮಾನ ನಿಲ್ದಾಣ ತಲುಪಲಿದೆ. ಅಲ್ಲಿಂದ ಆಂಬ್ಯುಲೆನ್ಸ್ ಮೂಲಕ ಬೀದರ್ ಗೆ ತರಲಾಗುತ್ತದೆ.

ಮೃತಪಟ್ಟವರ ಕುಟುಂಬಸ್ಥರ ದುಃಖ ಬೀದರ್ ನಲ್ಲಿ ಮುಗಿಲುಮುಟ್ಟಿದೆ. ತಮ್ಮವರನ್ನು ಕಳೆದುಕೊಂಡವರ ಶೋಕ ಹೇಳತೀರದಾಗಿದೆ. ಅಯೋಧ್ಯೆಗೆ ತೆರಳುತ್ತಿದ್ದಾಗ ಟಿಟಿಗೆ ಟ್ರಕ್ ಡಿಕ್ಕಿ ಹೊಡೆದು 8 ಮಂದಿ ಮೃತಪಟ್ಟಿದ್ದರು. ಲಖಿಂಪುರದಿಂದ ಶವಗಳನ್ನು ರವಾನಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದರು.

ಗಾಯಾಳುಗಳು ಅಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು