Categories: ಬೀದರ್

ಉತ್ತರ ಪ್ರದೇಶ ರಸ್ತೆ ಅಪಘಾತ: ಇಂದು ಅಪರಾಹ್ನ ಮೃತದೇಹ ಬೀದರ್ ಗೆ ರವಾನೆ

ಬೀದರ್: ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ನಿನ್ನೆ ಭಾನುವಾರ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 7 ಮಂದಿ ಕನ್ನಡಿಗರ ಮೃತದೇಹವನ್ನು ಇಂದು ಸೋಮವಾರ ಅಪರಾಹ್ನ ಬೀದರ್ ಜಿಲ್ಲೆಗೆ ರವಾನಿಸಲಾಗುತ್ತದೆ.

ಅಪರಾಹ್ನ 3 ಗಂಟೆ ಹೊತ್ತಿಗೆ ಮೃತದೇಹಗಳು ಬೀದರ್ ತಲುಪಲಿವೆ. ಬೆಳಗ್ಗೆ 10 ಗಂಟೆಗೆ ಲಖ್ನೌನಿಂದ ವಿಮಾನದಲ್ಲಿ ಮೃತದೇಹಗಳನ್ನು ರವಾನೆ ಮಾಡಲಾಗುತ್ತಿದ್ದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಹೈದರಾಬಾದ್ ವಿಮಾನ ನಿಲ್ದಾಣ ತಲುಪಲಿದೆ. ಅಲ್ಲಿಂದ ಆಂಬ್ಯುಲೆನ್ಸ್ ಮೂಲಕ ಬೀದರ್ ಗೆ ತರಲಾಗುತ್ತದೆ.

ಮೃತಪಟ್ಟವರ ಕುಟುಂಬಸ್ಥರ ದುಃಖ ಬೀದರ್ ನಲ್ಲಿ ಮುಗಿಲುಮುಟ್ಟಿದೆ. ತಮ್ಮವರನ್ನು ಕಳೆದುಕೊಂಡವರ ಶೋಕ ಹೇಳತೀರದಾಗಿದೆ. ಅಯೋಧ್ಯೆಗೆ ತೆರಳುತ್ತಿದ್ದಾಗ ಟಿಟಿಗೆ ಟ್ರಕ್ ಡಿಕ್ಕಿ ಹೊಡೆದು 8 ಮಂದಿ ಮೃತಪಟ್ಟಿದ್ದರು. ಲಖಿಂಪುರದಿಂದ ಶವಗಳನ್ನು ರವಾನಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದರು.

ಗಾಯಾಳುಗಳು ಅಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Gayathri SG

Recent Posts

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

5 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

10 mins ago

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

21 mins ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

34 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

38 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

1 hour ago