ಬೀದರ್: ಬೀದರ್ ಕೋವಿಡ್ ಮುಕ್ತ ಮೊದಲ ಜಿಲ್ಲೆ ಎಂದು ಗುರುವಾರ ಘೋಷಣೆ ಮಾಡಲಾಗಿದೆ. ಸೆಪ್ಟಂಬರ್ 2 ರಂದು ಯಾವುದೇ ಕೊರೋನಾ ಕೇಸ್ ದಾಖಲಾಗಿಲ್ಲ.
ಸೋಂಕು ತಗುಲಿದ್ದ ರೋಗಿಗಳು ಮತ್ತು ಹೋಮ್ ಕ್ವಾರಂಟೈನ್ ನಲ್ಲಿದ್ದವರು ಚೇತರಿಸಿಕೊಂಡಿದ್ದಾರೆ, ಬೀದರ್ ಶೂನ್ಯ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಕೋವಿಡ್ನ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ, ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಬೀದರ್ ಜಿಲ್ಲೆಯು ಆತಂಕಕ್ಕೆ ಕಾರಣವಾಗಿತ್ತು ಎಂಬುದನ್ನು ಸ್ಮರಿಸಬಹುದು. ಆದರೆ ಕಳೆದ ಒಂದು ತಿಂಗಳಲ್ಲಿ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ.
ಕಳೆದ ಎರಡು ಕೋವಿಡ್ ಅಲೆಗಳಲ್ಲಿ ಜಿಲ್ಲೆಯಲ್ಲಿ 24,300 ಪಾಸಿಟಿವ್ ಪ್ರಕರಣಗಳು ದಾಖಲಾಗಿತ್ತು. ಸೋಂಕು ತಗುಲಿದ್ದ 23,898 ಜನರು ಚೇತರಿಸಿಕೊಂಡಿದ್ದು 398 ಜನರು ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ, 18 ವರ್ಷಕ್ಕಿಂತ ಮೇಲ್ಪಟ್ಟ 7,54,223 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಬಹುಶಃ ಹೆಚ್ಚಿನ ಜನರು ಲಸಿಕೆ ಪಡೆದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜನರು ಕೋವಿಡ್ -19 ಪ್ರೋಟೋಕಾಲ್ಗಳನ್ನು ಅನುಸರಿಸುತ್ತಿದ್ದಾರೆ, ಇದು ಜಿಲ್ಲೆಯು ಕೋವಿಡ್ ಮುಕ್ತವಾಗಲು ಕಾರಣವಾಗಿರಬಹುದು ಎಂದು ಹೇಳಲಾಗಿದೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…