Categories: ಬೀದರ್

ಡಿಸೆಂಬರ್‌ 2ರಿಂದ ಬೀದರ್‌- ಬೆಂಗಳೂರು ನಡುವೆ ವಿಮಾನ ಯಾನ ಪುನರಾರಂಭ

ಬೀದರ್‌ : ಡಿಸೆಂಬರ್‌ 2ರಿಂದ ಬೀದರ್‌- ಬೆಂಗಳೂರು ನಡುವೆ ವಿಮಾನ ಯಾನ ಸೇವೆ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ತಿಳಿಸಿದ್ದಾರೆ.

ಜಿಎಂಆರ್‌ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಲಾಗಿದೆ. ಡಿಸೆಂಬರ್ 2ರಿಂದ ವಿಮಾನ ಸೇವೆ ಆರಂಭಿಸಲಾಗುವುದೆಂದು ಟ್ರುಜೆಟ್‌ ಕಾರ್ಯಾಚರಣೆ ವಿಭಾಗದ ವ್ಯವಸ್ಥಾಪಕ ಪ್ರಸಾದ ದೃಢಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಟ್ರುಜೆಟ್‌ ಸರಿಯಾಗಿ ಸೇವೆ ಕೊಡುತ್ತಿಲ್ಲ ಎಂದು ಪ್ರಯಾಣಿಕರು ಬುಕ್‌ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಪ್ರಯಾಣಿಕರ ಕೊರತೆ ಕಾರಣ ಕೊನೆಯ ಕ್ಷಣಗಳಲ್ಲಿ ಟ್ರುಜೆಟ್‌ ಮುನ್ಸೂಚನೆ ನೀಡದೆ ವಿಮಾನ ಹಾರಾಟ ಸ್ಥಗಿತಗೊಳಿಸುತ್ತಿದೆ ಎನ್ನುವ ವಿಷಯಗಳು ಸಭೆಯಲ್ಲಿ ಪ್ರಸ್ತಾಪವಾಗಿವೆ. ಎಲ್ಲವನ್ನೂ ಸರಿಪಡಿಸಿ ಮತ್ತೆ ವಿಮಾನ ಸೇವೆ ಆರಂಭಿಸುವ ಭರವಸೆಯನ್ನು ಟ್ರುಜೆಟ್‌ನ ಅಧಿಕಾರಿಗಳು ನೀಡಿದ್ದಾರೆ.

ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಸಂಸದ ಭಗವಂತ ಖೂಬಾ ಅವರು ಕೇಂದ್ರ ಸಚಿವರಾದ ಮೇಲೆ ವಿಮಾನ ಸೇವೆ ಬಂದ್‌ ಆಗಿದೆ ಎಂದು ವಾಗ್ದಾಳಿ ನಡೆಸಿದ್ದರು.

Gayathri SG

Recent Posts

ಟಿ20 ವಿಶ್ವಕಪ್​ಗೆ ಭಯೋತ್ಪಾದಕರ ಬೆದರಿಕೆ !

ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್​ಗೆ ಭಯೋತ್ಪಾದಕರು…

38 seconds ago

ಬೆಂಗಳೂರಿನಲ್ಲಿ ಬಿಯರ್ ಕೊರತೆ; ಆಫರ್​​ಗಳಿಗೆ ಬ್ರೇಕ್

ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಬೆಂಗಳೂರು ನಗರದಲ್ಲಿ ಶೀಘ್ರದ್ಲಲೇ ಬಿಯರ್​ ಬಿಕ್ಕಟ್ಟು ಕೂಡ ಸೃಷ್ಟಿಯಾಗಬಹುದು ಎಂದು ಮಾರುಕಟ್ಟೆ ಮೂಲಗಳು ಅಂದಾಜಿಸಿದೆ.

11 mins ago

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ : ಇಬ್ಬರನ್ನು ಹೊಡೆದು ಕೊಂದ ಜನ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್​ ಜಿಲ್ಲೆಯಲ್ಲಿ…

48 mins ago

ರೇವಣ್ಣ ವಿಡಿಯೋ: ಫೋಟೋ ಹರಿಯಬಿಡುವುದು ಶಿಕ್ಷಾರ್ಹ ಅಪರಾಧ : ಎಸ್ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್‌ಐಟಿ ಮುಖ್ಯಸ್ಥ…

1 hour ago

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥ

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…

2 hours ago

ಮಲೆನಾಡ ನಾಸ್ತುಷ್ ಪ್ರದೀಪ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೇರಿಕಾದ ಆಟಗಾರ

ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…

2 hours ago