ಬೀದರ್: ನಾಡಗೀತೆ ಮೊಟಕುಗೊಳಿಸುವ ಕುರಿತಂತೆ ರಾಜ್ಯ ಸರ್ಕಾರ ಒಂದು ವಾರದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ವಿ.ಸುನಿಲ್ ಕುಮಾರ್, ನಾಡಗೀತೆಯ ಧಾಟಿ ಹಾಗೂ ಮೊಟಕುಗೊಳಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಕುರಿತ ಗೊಂದಲಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾಡಗೀತೆಯನ್ನು 21 ಸಾಲುಗಳಿಗೆ ಸೀಮಿತಗೊಳಿಸಿ ಸಿ.ಅಶ್ವತ್ಥ್ ಅವರ ರಾಗ ಸಂಯೋಜನೆಯಂತೆ ಹಾಡಬೇಕೆಂದು ಪ್ರಸ್ತಾವನೆ ವಿವಾದಕ್ಕೆ ಕಾರಣವಾಗಿತ್ತು.