ಬೀದರ್: ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ನ.2ರಂದು ಔರಾದ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರವಾಸ ಕೈಗೊಂಡು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ತೀವ್ರ ಸಂಕಷ್ಟದಲ್ಲಿದವರ ಮನೆಗೆ ತೆರಳಿ ವೈಯಕ್ತಿಕ ಧನಸಹಾಯ ಮಾಡಿದರು.
ಜೋಜನಾ ಗ್ರಾಮದಲ್ಲಿ ಕ್ಯಾನ್ಸರ ರೋಗದಿಂದಾಗಿ ಮರಣ ಹೊಂದಿದ್ದ ರಮೇಶ ಅವರ ಮನೆಗೆ ಭೇಟಿ ನೀಡಿದ ಸಚಿವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಕುಟುಂಬ ನಿರ್ವಹಣೆಗಾಗಿ ಮತರ ಪತ್ನಿ ಶಕುಂತಲಾ ಅವರಿಗೆ ವೈಯಕ್ತಿಕ ಸಹಾಯಧನ ನೀಡಿದರು.
ಶೆಂಬೆಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಮರಣ ಹೊಂದಿದ ಬಸವರಾಜ ಅವರ ಮನೆಗೆ ತೆರಳಿ, ಕುಟುಂಬಸ್ಥರ ಸಮಸ್ಯೆಗಳನ್ನು ಆಲಿಸಿದರು. ವೈಯಕ್ತಿಕ ಧನಸಹಾಯ ಮಾಡಿ, ಮಗುವಿನ ಹೆಸರಿನಲ್ಲಿ ಎಫ್.ಡಿ ಮಾಡಿಸುವಂತೆ ತಿಳಿಸಿದರು.
ಜನತೆಯ ಆಶೀರ್ವಾದದಿಂದಾಗಿ ನಾನು ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ. ನಾನು ಸದಾ ನಿಮ್ಮೊಂದಿಗಿದ್ದೇನೆ. ಯಾವುದೇ ಸಂಕಷ್ಟ ಬಂದರೂ ಎದೆಗುಂದದೆ ಎದುರಿಸಬೇಕು. ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬಾರದು. ನಾನು ದಿನದ 24 ಗಂಟೆಯೂ ನಿಮ್ಮ ಸೇವೆಗೆ ಸಿದ್ಧನಿದ್ದೇನೆ. ಏನೇ ಸಮಸ್ಯೆಗಳಿದ್ದರೂ ತಮ್ಮನ್ನು ಸಂಪರ್ಕಿಸಬಹುದು ಎಂದು ಸಚಿವರು ನೊಂದ ಕುಟುಂಬಸ್ಥರಲ್ಲಿ ಧೈರ್ಯ ತುಂಬಿದರು.
ಜೋಜನಾ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಕರ್ತವ್ಯ ನಿರತನಾಗಿದ್ದ ಚಮ್ಮಾರ ವ್ಯಕ್ತಿಯನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ಹಣಕಾಸಿನ ಕೊರತೆಯಿಂದಾಗಿ ಅಂಗಡಿ ತೆರೆಯಲು ಸಾಧ್ಯವಾಗದೇ ರಸ್ತೆ ಬದಿಯಲ್ಲೇ ವ್ಯಾಪಾರ ಮಾಡಿಕೊಳ್ಳುತ್ತಿದ್ದೇನೆ ಎಂದು ವ್ಯಕ್ತಿಯು ತನ್ನ ಸಮಸ್ಯೆಗಳನ್ನು ಹಂಚಿಕೊಂಡರು. ಇವರಿಗೆ ಸರ್ಕಾರದ ಯೋಜನೆಗಳಡಿ ಸೌಲಭ್ಯ ಕಲ್ಪಿಸಿಕೊಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಬಂಡೆಪ್ಪಾ ಕಂಟೆ, ಬಿಜೆಪಿ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ವಸಂತ ವಕೀಲ್, ಶಿವಕುಮಾರ ಪಾಂಚಾಳ, ಭರತ ಕದಂ, ಪ್ರಕಾಶ ಅಲ್ಮಾಜೆ ಸೇರಿದಂತೆ ಇತರರಿದ್ದರು.