ಬೀದರ್: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಅಲ್ಲಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯೊಬ್ಬನನ್ನು ಭಾಲ್ಕಿ ಪೊಲೀಸರು ಉದಗೀರ್ನಲ್ಲಿ ಭಾನುವಾರ ಬಂಧಿಸಿದ್ದಾರೆ.
ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣಾಧೀನ ಕೈದಿ ಕಾಸರತುಗಾಂವವಾಡಿಯ ದತ್ತಾ ಉಮಾಕಾಂತ ಬಿರಾದಾರ ಬಂಧಿತ.
ಅನಾರೋಗ್ಯದ ಹಿನ್ನೆಲೆಯಲ್ಲಿ ಬ್ರಿಮ್ಸ್ಗೆ ದಾಖಲಿಸಲಾಗಿತ್ತು. ಶನಿವಾರ ಶೌಚಾಲಯಕ್ಕೆ ಹೋಗುವುದಾಗಿ ಹೇಳಿ ಅಲ್ಲಿಂದ ಪರಾರಿಯಾಗಿದ್ದ. ಪೊಲೀಸ್ ಇನ್ಸ್ಪೆಕ್ಟರ್ ವಿಜಯಕುಮಾರ, ಪಿಎಸ್ಐ ಸುದರ್ಶನ ರೆಡ್ಡಿ, ಸಿಬ್ಬಂದಿ ಶಿವರಾಜ, ಬೀರಪ್ಪಾ, ಡಿಎಸ್ಬಿ ಘಟಕದ ವಿಶೇಷ ತಂಡದ ನಿರಂತರ ಪ್ರಯತ್ನದಿಂದ ಮಹಾರಾಷ್ಟ್ರದ ಉದಗೀರ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.