Categories: ಬೀದರ್

ಬೀದರ್: ಮೀನಕೇರಾ ಕ್ರಾಸ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 262 ಕೆ.ಜಿ ಗಾಂಜಾ ವಶಕ್ಕೆ

ಬೀದರ್‌: ತಾಲ್ಲೂಕಿನ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀನಕೇರಾ ಕ್ರಾಸ್ ಬಳಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಅಡ್ಡಗಟ್ಟಿರುವ ಪೊಲೀಸರು ಬರೋಬ್ಬರಿ 262 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಅಂದಾಜು 26.20 ಲಕ್ಷ ಮೌಲ್ಯದ ಗಾಂಜಾ, ಟಾಟಾ ಗೂಡ್ಸ್ ವಾಹನ, ಮೊಬೈಲ್, ರೂ. 500 ನಗದು ವಶಕ್ಕೆ ಪಡೆದು ಆರೋಪಿಗಳಾದ ರುಸ್ತುಮ್ ಅಲಿಯಾಸ್ ಖಾಲೀದ್ ಮುಜಫರ್ ಖಾನ್ ಮು. ಶಾಮರಾಜಪುರ, ಭಾಲ್ಕಿ ತಾಲ್ಲೂಕಿನ ಮಾವಿನಹಳ್ಳಿಯ ಮೋಹನ್ ಕಾಶಿನಾಥ ಮೇತ್ರೆ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಡಿವೈಎಸ್ಪಿ ಕೆ.ಎಮ್ ಸತೀಶ ಅವರ ಮಾರ್ಗದರ್ಶನದಲ್ಲಿ ಬೀದರ ಗ್ರಾಮೀಣ ಸಿಪಿಐ ಶ್ರೀಕಾಂತ್ ಅಲ್ಲಾಪುರ ಬಗದಲ್ ಠಾಣೆ ಪಿಎಸ್ಐ ಸಂಗೀತಾ, ಎಎಸ್ ಐ ಅಶೋಕ ಕೋಟೆ, ವಿಲಾಸ್, ಸಿಬ್ಬಂದಿಯಾದ ರವಿಕಾಂತ, ಸುನೀಲ ಧಿಮಾಕೆ, ಸುನೀಲ ರಾಜ್, ಅಶೋಕ ಕೋಟೆ, ಶಿವಕುಮಾರ್, ಮಕ್ಸೂದ್, ಶರಣಯ್ಯ ಸ್ವಾಮಿ ಪ್ರಶಾಂತ, ವಾಹನ ಚಾಲಕ ಸಂಜುಕುಮಾರ್ ಪಾಲ್ಗೊಂಡಿದ್ದರು.

ಕಾರ್ಯಾಚರಣೆ ನಡೆಸಿ ಗಾಂಜಾ ವಶಪಡಿಸಿಕೊಂಡಿರುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ ಬಾಬು ಶ್ಲಾಘಿಸಿದ್ದಾರೆ. ಈ ಕುರಿತು ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Sneha Gowda

Recent Posts

ಗರ್ಭಿಣಿಯ ಮರ್ಯಾದೆ ಗೇಡು ಹತ್ಯೆ: ಇಬ್ಬರು ಆರೋಪಿಗಳಿಗೆ 4.19 ಲಕ್ಷ ರೂ. ದಂಡ, ಗಲ್ಲು ಶಿಕ್ಷೆ

ಗರ್ಭಿಣಿಯನ್ನು ಮರ್ಯಾದೆ ಗೇಡು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

4 mins ago

ಆಯೋಗದ ನಿಯಮ ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ವಿರುದ್ಧ ಕ್ರಮ ಖಚಿತ : ಡಿಸಿ

ಚುನಾವಣಾ ಆಯೋಗವು ಮೇ. 5, 2024 ರ ಸಾಯಂಕಾಲ 6 ಗಂಟೆಯಿಂದ ಮತದಾನ ದಿನವಾದ ಮೇ. 07, 2024ರಂದು ಮತದಾನ…

25 mins ago

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

32 mins ago

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ ಕಾಂಗ್ರೆಸ್‌ ಅಭ್ಯರ್ಥಿ

ಇದೀಗ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.   ಸೂರತ್, ಇಂದೋರ್ ಬಳಿಕ ಇದೀಗ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್…

35 mins ago

ಫೇಕ್‌ ನ್ಯೂಸ್‌: ಕೋವಿಶೀಲ್ಡ್​ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು

ಕೊರೊನಾ ಸಂದರ್ಭದಲಲಿ ಕೋವಿಶೀಲ್ಡ್‌ ಪಡೆದವರು ತಂಪುಪಾನಿಯ,ಐಸ್​ ಕ್ರೀಮ್ ಸೇವಿಸಬಾರದು ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

50 mins ago

ಬಿಸಿಲಿನ ಶಾಖಕ್ಕೆ ರಾಯಚೂರಿನಲ್ಲಿ ಐವರು ಬಲಿ : ಹೊತ್ತಿ ಉರಿದ ಕಾರು

ಜಿಲ್ಲೆಯಲ್ಲಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಸಾಖಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಹಾಗೂ ಶಕ್ತಿನಗರದಲ್ಲಿ ಕಾರಿಗೆ ಬೆಂಕಿ…

1 hour ago