ಬೀದರ್: ಧಾರ್ಮಿಕ ಕೇಂದ್ರ ದೇವಸ್ಥಾನಗಳನ್ನು ನೆಲಸಮಗೊಳಿಸಿ ಬಹುಸಂಖ್ಯಾತ ಹಿಂದುಗಳ ಭಾವನೆಗಳಿಗೆ ಧಕ್ಕೆ ತಂದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ.
ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಜನರ ಅಭಿವೃದ್ಧಿಗಾಗಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡಿಲ್ಲ. ಬದಲಾಗಿ ಹಿಂದೂಗಳ ಶ್ರದ್ಧಾ ಕೇಂದ್ರಗಳನ್ನು ನೆಲಸಮ ಮಾಡಲು ತಮ್ಮ ಆಡಳಿತವನ್ನು ಛೂ ಬಿಟ್ಟಿದ್ದಾರೆ. ಹಿಂದಿನ ಸಿಎಂ ಬಿಎಸ್ವೈ ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಮಠ- ಮಂದಿರಗಳನ್ನು ಅಭಿವೃದ್ಧಿಪಡಿಸಿದ್ದರು. ಆದರೆ, ಇಂದು ಸಿಎಂ ಹುದ್ದೆಗಾಗಿ ಅವರೇ ಸೂಚಿಸಿದ ವ್ಯಕ್ತಿ, ಬಿಎಸ್ವೈ ಮಾರ್ಗ ಅನುಸರಿಸದೇ ಹಿಂದೂಗಳ ಜತೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.