Categories: ಬೀದರ್

2,200 ಲಂಚ ಪಡೆದ ಗ್ರಾಮ ಲೆಕ್ಕಿಗ : ಮೂರು ವರ್ಷ ಜೈಲು,20 ಸಾವಿರ ರೂಪಾಯಿ ದಂಡ

ಬೀದರ್‌:   ಜಮೀನಿನ ಸರ್ವೇಗೆ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ ಬಸವಕಲ್ಯಾಣ ತಾಲ್ಲೂಕಿನ ಬೇಟಬಾಲಕುಂದಾ ಗ್ರಾಮದ ಗ್ರಾಮ ಲೆಕ್ಕಿಗ ಅಯೂಬ್‌ ಖಾನ್‌ ಅಬ್ದುಲ್‌ ಖಾನ್‌ ಎಂಬುವರಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ 20 ಸಾವಿರ ರೂಪಾಯಿ ದಂಡ ವಿಧಿಸಿದೆ.

ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಜಯಕುಮಾರ ಎಮ್‌. ಆನಂದಶೆಟ್ಟಿ ಪ್ರಕರಣದ ವಿಚಾರಣೆ ನಡೆಸಿ, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಯೂಬ್‌ ಖಾನ್‌ಗೆ ಮೂರು ವರ್ಷ ಜೈಲು, ₹20 ಸಾವಿರ ದಂಡ ವಿಧಿಸಿದ್ದಾರೆ. ದಂಡ ಭರಿಸಲು ತಪ್ಪಿದ್ದಲ್ಲಿ ಆರು ತಿಂಗಳು ಜೈಲು ಶಿಕ್ಷೆ ನೀಡಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ. ಲೋಕಾಯುಕ್ತ ಪೊಲೀಸರ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೇಶವರಾವ ಶ್ರೀಮಾಳೆ ವಾದ ಮಂಡಿಸಿದರು.

ಬಸವಕಲ್ಯಾಣ ತಾಲ್ಲೂಕಿನ ಬೇಟಬಾಲಕುಂದಾ ಗ್ರಾಮದ ಸರ್ವೇ ನಂಬರ್‌ 149/ಎ/2 ನಲ್ಲಿರುವ 6 ಎಕರೆ 38 ಗುಂಟೆ ಕೃಷಿ ಜಮೀನು ಸಹೋದರನ ಹೆಸರಿಗೆ ಪೋಡಿ ಮಾಡಿಕೊಡುವುದಕ್ಕಾಗಿ ಗ್ರಾಮದ ಮೊಹಮ್ಮದ್‌ ಖಾನ್‌ ಶೇರ್‌ ಖಾನ್‌ ಅವರು ಗ್ರಾಮ ಲೆಕ್ಕಿಗ ಅಯೂಬ್‌ ಖಾನ್‌ಗೆ ಅರ್ಜಿ ಕೊಟ್ಟಿದ್ದರು.

ಇದಕ್ಕಾಗಿ 2,200 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 2011ರ ಜನವರಿ 19ರಂದು ಬಸವಕಲ್ಯಾಣ ನಗರದ ಮಳಿಗೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು. ಪೊಲೀಸ್‌ ಇನ್‌ಸ್ಪೆಕ್ಟರ್‌ ಆರ್‌.ಎಸ್‌. ಜಹಾಗೀರದಾರ ಅವರು ತನಿಖೆ ನಡೆಸಿ, ಲಂಚ ನಿಷೇಧ ಕಾಯ್ದೆ ಅಡಿಯಲ್ಲಿ ಅಯೂಬ್‌ ಖಾನ್‌ ವಿರುದ್ಧ ದೋಷರೋಪಣಾ ಪತ್ರ ಸಲ್ಲಿಸಿದ್ದರು

Nisarga K

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

13 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

18 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

33 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

50 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago