Categories: ಬೀದರ್

25 ಸಾವಿರ ಕೋಟಿ ಅನುದಾನದಲ್ಲಿ ದೇಶದ 508 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ: ಪ್ರಧಾನಿ ನರೇಂದ್ರ ಮೋದಿ

ಬೀದರ್: 25 ಸಾವಿರ ಕೋಟಿ ಅನುದಾನದಲ್ಲಿ ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ದೇಶದ 508 ರೈಲ್ವೆ ನಿಲ್ದಾಣಗಳನ್ನು ನಿಲ್ದಾಣಗನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.

ಅವರು ರವಿವಾರ ವರ್ಚುವಲ್ ವೇದಿಕೆ ಮೂಲಕ ಬೀದರ ಸೇರಿದಂತೆ ದೇಶದ 508 ರೈಲ್ವೆ ನಿಲ್ದಾಣಗಳು ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಉನ್ನತಿಕರಣಗೊಳ್ಳಲಿರುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ದೇಶದ 1300 ರೈಲ್ವೆ ನಿಲ್ದಾಣಗಳನ್ನು ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿ ಮಾಡುವ ಗುರಿ ಇದರ ಮೊದಲ ಭಾಗವಾಗಿ 508 ರೈಲ್ವೆ ನಿಲ್ದಾಣಗಳಿಗೆ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ.

ಇದರಡಿಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಉತ್ತಮ ಪಾರ್ಕಿಂಗ್ ವ್ಯವಸ್ಥೆ , ವೇಟಿಂಗ್ ರೂಪ್ , ಶಾಪಿಂಗ್ ಕಾಂಪ್ಲೆಕ್ಸ್ , ಪ್ಲಾಟ್ ಫಾರಂನಲ್ಲಿ ಆಸನ ವ್ಯವಸ್ಥೆ ಸೇರಿದಂತೆ ನಿಲ್ದಾಣದ ಸರ್ವಾಂಗಿಣ ಅಭಿವೃದ್ಧಿಯಾಗಲಿದೆ ಎಂದರು . ಪ್ರಸಕ್ತ ಸಾಲಿನಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಸುಮಾರು 250 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ . ಹೆಚ್ಚಿನ ರೈಲ್ವೆ ನಿಲ್ದಾಣದಲ್ಲಿ ಸೋಲಾರ ಬಳಕೆ ಮಾಡಲಾಗುತ್ತಿದೆ. ಹಸಿರುಕರಣಕ್ಕೆ ಹೆಚ್ಚು ಮಹತ್ವ ನಿಡಲಾಗಿದೆ. ಇಗಾಗಲೇ ಹೆಚ್ಚಿನ ರೈಲುಗಳಿಗೆ ವಿದ್ಯುತಿ ಚಾಲಿತ ರೈಲುಗಳಾಗಿ ಮಾರ್ಪಾಡು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ರೈಲುಗಳು ವಿದ್ಯುತ ಚಾಲಿತವಾಗಲಿವೆ ಇದರಿಂದ ಪರಿಸರ ರಕ್ಷಣೆಯಾಗಿಲಿದೆ ಎಂದರು.

ರೈಲ್ವೆ ನಿಲ್ದಾಣಗಳು ಈ ದೇಶದ ನಾಗರಿಕರಿಗೆ ಒಗ್ಗುಡಿಸುವ ತಾಣವಾಗಿವೆ ಇವುಗಳು ನಗರದ ಪ್ರತಿಬಿಂಬ ವಿದಂತೆ ಇದರ ಇವುಗಳ ಪ್ರಗತಿಯಿಂದ ನಗರದ ಪ್ರಗತಿ ಸಾಧ್ಯ ಆದರಿಂದ ಇವುಗಳ ಪ್ರಗತಿಗೆ ಮುಂದಾಗವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು . ಈ ಯೋಜನೆಯಡಿ ಅಭಿವೃದ್ಧಿ ಹೊಂದುವ ರೈಲ್ವೆ ನಿಲ್ದಾಣಗಳು ಉದ್ಯೋಗ ಸೃಷ್ಟಿಯ ಜೊತೆಗೆ ಆರ್ಥಿಕ ಪ್ರಗತಿ ಹಾಗೂ ಆ ನಗರಗಳ ಇತಿಹಾಸ ಹೇಳಲಿವೆ.

ಒಂದು ನಿಲ್ದಾಣ ಒಂದು ಉತ್ಪನ್ನದಡಿ ಮಳಿಗೆಗಳು ಇಲ್ಲಿ ಇರಲಿವೆ ಇದರಿಂದ ಸ್ಥಳಿಯ ಉತ್ಪನ್ನದ ಪ್ರಗತಿಯ ಜೋತೆಗೆ ಬೇಡಿಕೆ ಹೆಚ್ಚಾಗಲಿದೆ ಎಂದರು . ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಮಾತನಾಡಿ, ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಬೀದರ ರೈಲ್ವೆ ನಿಲ್ದಾಣ ಅಭಿವೃದ್ಧಿ ಹೊಂದಲಿದ್ದು ಇದರ ಲಾಭ ಬೀದರ ಜಿಲ್ಲೆಯ ಎಲ್ಲಾ ಜನರಿಗೆ ಸಿಗಲಿದೆ.

ಕಳೆದ 9 ವರ್ಷಗಳಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ ಅದರಲ್ಲಿ ಇದು ಒಂದು ಪ್ರಮುಖ ಯೋಜನೆಯಾಗಿದ್ದು ಇದು ಮುಂದಿನ ದಿನಗಳಲ್ಲಿ ಆರ್ಥಿಕ ಪ್ರಗತಿಗೆ ಸಹಕಾರವಾಗಲಿದೆ ಎಂದರು. ರೈಲ್ವೆ ಪ್ರಯಾಣ ಬಡವರಿಗೆ ಮಾತ್ರ ಸೀಮಿತ ಎಂಬ ಹಣೆ ಪಟ್ಟಿ ಇತ್ತು ಆದರೆ ಈಗ ದೃಷ್ಠಿಕೋನ ಬದಲಾಗಿದೆ ಇಂದು ಎಲ್ಲಾ ವರ್ಗದ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ.

ದೇಶದಲ್ಲಿ ಅಭಿವೃದ್ಧಿಪಡಿಸಿದ 50  ಭಾರತ ರೈಲುಗಳು ಇಂದು ದೇಶದಲ್ಲಿ ಸೇವೆ ಸಲ್ಲಿಸುತ್ತಿವೆ ಮುಂದಿನ ದಿನಗಳಲ್ಲಿ ಇವುಗಳ ಸಂಖ್ಯೆ 400 ಕ್ಕೆ ಏರಿಕೆಯಾಗಲಿವೆ . ಬುಲೇಟ್ ಟ್ರೇನ್ ಕಾಮಗಾರಿ ಪ್ರಗತಿಯಲ್ಲಿ ಇದು ರೈಲ್ವೆ ಪ್ರಗತಿ ಸೂಚಕವಾಗಿದೆ ಎಂದರು.

ವಿಧಾನ ಪರಿಷತ ಸದಸ್ಯ ರಘುನಾಥರಾವ ಮಲ್ಕಾಪುರ ಮಾತನಾಡಿ , ಬೀದರ್ ಜಿಲ್ಲೆಯ ಜನರು ಬೇರೆ ರೈಲ್ವೆ ನಿಲ್ದಾಣವನ್ನು ಕಂಡು ತಮ್ಮ ಜಿಲ್ಲೆಯ ರೈಲ್ವೆ ನಿಲ್ದಾಣದ ಪ್ರಗತಿಗೆ ಹಾತೊರೆಯುತ್ತಿದ್ದರು ಇಂದು ಅವರ ಕನಸು ನನಸಾಗಿದೆ ಬೀದರ ರೈಲು ನಿಲ್ದಾಣ ಉನ್ನತಿಯತ್ತ ಪಯಣ ಬೆಳೆಸಿದೆ ಎಂದು ಹೇಳಿದರು.

ಸಂಸದರ ಪ್ರಯತ್ನದಿಂದ ಇಂದು ಬೀದರ ರೈಲ್ವೆ ನಿಲ್ದಾಣ ಈ ಯೋಜನೆಯಡಿ ಆಯ್ಕೆಯಾಗಿದೆ ಹಾಗೂ ಅವರ ಉತ್ತಮ ಕೆಲಸದಿಂದ ಇಂದು ಕೇಂದ್ರದ ಅನೇಕ ಯೋಜನೆಗಳ ಲಾಭ ಬೀದರ ಜಿಲ್ಲೆಯ ಜನರು ಪಡೆಯುವಂತಾಗಿದೆ ಮುಂದಿನ ದಿನಗಳಲ್ಲಿ ಜನರ ಆರ್ಶಿವಾದ ಅವರ ಮೇಲಿರಲಿದೆ ಎಂದರು.
ಬೀದರ್ ದಕ್ಷಿಣ ಶಾಸಕರಾದ ಡಾ . ಶೈಲೇಂದ್ರ ಕೆ ಬೆಲ್ದಾಳೆ, ಹುಮನ್ನಾಬಾದ ಶಾಸಕರಾದ ಡಾ . ಸಿದ್ದಲಿಂಗಪ್ಪ ಎಸ್ . ಪಾಟೀಲ್ ಮಾತನಾಡಿದರು.

ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕತ ಅಹಮದ್ ರಷೀದ್ ಖಾದಿ , ಹಚ್ ಕಮಿಟಿ ಅಧ್ಯಕ್ಷ ರಘುವುದ್ದಿನ್ ಕಚೇರಿವಾಲೆ , ರೈಲ್ವೆ ವಿಭಾಗಿ ಕಛೇರಿ ವ್ಯವಸ್ಥಾಪಕ ರಾಜೀವ ಕುಮಾರ ಕಂಗಲೆ , ಶಿವರಾಜ ಗಂದಗೆ , ಬಸವಲಿಂಗ ಪಟ್ಟದೇವರು , ರೈಲ್ವೆ ಇಲಾಖೆ ಅಧಿಕಾರಿಗಳು , ಸಿಬ್ಬಂದಿಗಳು ಶಾಲಾ- ಕಾಲೇಜಿನ ಮಕ್ಕಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ashika S

Recent Posts

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

12 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

24 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

27 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

42 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

57 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

1 hour ago