ಬೀದರ್: ಬಸವಕಲ್ಯಾಣ ನಗರದಲ್ಲಿ ರಸ್ತೆಯಲ್ಲಿ ಚಲಿಸುತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರು ಧಗಧಗನೆ ಹೊತ್ತಿ ಉರಿದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ.
ಮಹಾರಾಷ್ಟ್ರದ ತೂರುರಿ ಗ್ರಾಮದ ನಿವಾಸಿ ನಾವೇದ್ ತ್ರೀಜಾದೆ ಅವರಿಗೆ ಸೇರಿದ ಇರಟಿಗಾ ಕಾರಿಗೆ ಬೆಂಕಿ ತಗುಲಿರುವ ಘಟನೆ ಸಂಭವಿಸಿದೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಬಸವಕಲ್ಯಾಣ ನಗರಕ್ಕೆ ಆಗಮಿಸುವಾಗ ತ್ರಿಪುರಾಂತ ಬಳಿಯ ಸೇತುವೆ ಬಳಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೆ ಬೆಂಕಿ ತಗುಲಿದ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಕಾರಿಗೆ ಬೆಂಕಿ ತಗುಲುತಿದ್ದಂತೆ ಕಾರಿನಲ್ಲಿ ಪ್ರಯಾಣಿಸುತಿದ್ದ ಮೂವರು ತಕ್ಷಣ ಕೆಳಗೆ ಇಳಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುದ್ದಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ, ಆದರೆ ಅವರು ಆಗಮಿಸುವಷ್ಟರಲ್ಲಿ ಕಾರು ಸುಟ್ಟು ಭಸ್ಮವಾಗಿತ್ತು ಎಂದು ತಿಳಿದು ಬಂದಿದೆ.
ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.