ಬೀದರ್

ವಚನಕಾರರಲ್ಲಿ ಶ್ರೇಷ್ಠ ವಚನಕಾರ ಅಂಬಿಗರ ಚೌಡಯ್ಯ : ರಹೀಮ್ ಖಾನ್

ಬೀದರ: ಅಂಬಿಗರ ಚೌಡಯ್ಯನವರು ತಮ್ಮ ನಿಷ್ಠುರ ಹಾಗೂ ಕೆಚ್ಚೆದೆಯ ವಚನಗಳಿಂದ ಎಲ್ಲಾ ವಚನಕಾರರಿಗಿಂತ ಭಿನ್ನ ಮತ್ತು ಶ್ರೇಷ್ಠ ವಚನಕಾರರು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಬೀದರ ಉತ್ತರ ಶಾಸಕ ರಹೀಮ್ ಖಾನ್ ಹೇಳಿದರು.

ಶನಿವಾರ ನಗರ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ಕನ್ನಡ ಮತ್ತು ಸಂಸ್ಕçತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರದಲ್ಲಿ ಆಯೋಜಿಸಿದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಶರಣರು ನಮಗೆ ಸನ್ಮಾರ್ಗದಲ್ಲಿ ನಡೆಯಲು ದಾರಿ ತೋರಿದಂತೆ ಅಂಬಿಗರ ಚೌಡಯ್ಯನವರು ಸಹ ದಾರಿ ತೋರಿದ್ದಾರೆ ನಾವು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದ ಅವರು ನಾವು ಜೀವನದಲ್ಲಿ ಯಾರನ್ನು ಮೇಲು ಕೀಳು ಎನ್ನದೇ ಎಲ್ಲರನ್ನು ಸಮಾನವಾಗಿ ಕಾಣಬೇಕು ಅಂದಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುವುದು ಎಂದರು.

ಬೀದರನ ಸೆಂಟ್ ಪೌಲ್ ಡಿಗ್ರಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಜಗನಾಥ ಮುತ್ತಂಗಿ ಅವರು ಮಾತನಾಡಿ ಅಂಬಿಗರ ಜೌಡಯ್ಯನವರ ಜೀವನ ಕುರಿತು ಉಪನ್ಯಾಸ ನೀಡಿ ಚೌಡಯ್ಯನವರು 12ನೇ ಶತಮಾನದಲ್ಲಿ ಜಾರಿಯಲ್ಲಿದ್ದ ಅನಿಷ್ಠ ಪದ್ದತಿ, ಕಂದಚಾರ, ಅಸಮಾನತೆಯನ್ನು ತಮ್ಮ ವರಟು ವಚನಗಳ ಮೂಲಕ ವಿರೋಧಿಸಿ ಬಂಡಾಯದ ವಚನಕಾರರು ಎನಿಸಿಕೊಂಡರು ಎಂದು ಹೇಳಿದರು.

ಬೇರೆ ವಚನಕಾರರು ವಚನಗಳಿಗೆ ತಮ್ಮ ಇಷ್ಟ ದೇವರ ಅಂಕಿತವನ್ನು ಬಳಸಿದರೆ ಇವರು ತಮ್ಮ ವಚನಗಳಿಗೆ ತಾವೆ ಸಾಟಿ ಎಂಬAತೆ ತಮ್ಮದೆ ಅಂಕಿತ ಬಳಸಿ ಶ್ರೇಷ್ಠ ವಚನಕಾರಾದರು.

ಸುಮಾರು 280ಕ್ಕೂ ಹೆಚ್ಚು ವಚನಗಳನ್ನು ಅಂಬಿಗರ ಚೌಡಯ್ಯನವರು ರಚಿಸಿದ್ದು ಅವರು ರಚಿಸಿದ ವಚನಗಳ ಭಾಷಾ ಶೈಲಿ ಗಮಿನಿಸಿದರೆ ಅವರ ವಚನಗಳಿಗೆ ಸಾಟಿ ಮತ್ತೊಬ್ಬರಿಲ್ಲ ಎಂಬುವುದರ ಅರಿವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕçತಿ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರಾದ ಡಾ. ಗೌತಮ ಅರಳಿ, ನಿಂಬೋಳದ ಮಾತೆ ಮಾಣಿಕೇಶ್ವರಿ ಆಶ್ರಮದ ಶಾಂತಿ ಬಾಬಾ, ಜಿಲ್ಲಾ ಟೋಕರಿ ಕೋಳಿ ಸಮಾಜ ಸಂಘದ ಜಿಲ್ಲಾಧ್ಯಕ್ಷ ಜಗನ್ನಾಥ ಜಮಾದಾರ, ಜಿಲ್ಲಾ ಟೋಕರಿ ಕೋಳಿ ಸಮಾಜ ಸಂಘದ ಉಪಾಧ್ಯಕ್ಷ ಸುನೀಲ್ ಖಾಶಂಪೂರ, ಅಂಬಿಗರ ಚೌಡಯ್ಯ ಯುವ ಸೇನೆ ಅಧ್ಯಕ್ಷ ಸುನೀಲ ಭಾವಿಕಟ್ಟಿ, ಮಾರುತಿ ಮಾಸ್ಟರ್, ಪುಂಡಲಿಕಪ್ಪ ಹಾಗೂ ಸಮಾಜದ ಮುಖಂಡರು ಸೇರಿದಂತೆ ಇತರಿದ್ದರು.

ಕಾರ್ಯಕ್ರಮದ ಚಾಲನೆ ಮುನ್ನ ವಿವಿಧ ಕಲಾತಂಡಗಳೊAದಿಗೆ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೇರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ರಂಗಮAದಿರದ ವರೆಗೆ ವಿಜೃಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಸಮಾಜದ ಯುವಕರು ಕುಣಿದು ಕುಪ್ಪಳಿಸಿದರು.

Sneha Gowda

Recent Posts

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

17 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 hours ago