ಬೀದರ್: ‘ಪೊಲೀಸ್ ಠಾಣೆಯನ್ನು ಮಕ್ಕಳ ಸ್ನೇಹಿಯಾಗಿ ರೂಪಿಸಿರುವ ಅಧಿಕಾರಿಗಳ ಕ್ರಮ ಶ್ಲಾಘನೀಯ. ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸಲಾಗುತ್ತಿದೆ. ಲೋಕಸಭೆ ಚುನಾವಣೆ ಶಾಂತಿಯುತವಾಗಿ ನಡೆಯುವಂತಾಗಲು ಸರ್ವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್.ಹೇಳಿದರು.
ನಗರ ಠಾಣೆಯಲ್ಲಿ ಗುರುವಾರ ಏರ್ಪಡಿಸಿದ್ದ ಮಕ್ಕಳ ಸಹಾಯವಾಣಿ ಮತ್ತು ಆರೈಕೆ ಕೇಂದ್ರ ಉದ್ಘಾಟನೆ ಕಾರ್ಯದಲ್ಲಿ ಮಕ್ಕಳ ಆರೈಕೆ ಕೇಂದ್ರವನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಡಿವೈಎಸ್ಪಿ ಜಿ.ಎಸ್. ನ್ಯಾಮಗೌಡ, ಸಿಪಿಐ ಅಲಿಸಾಬ್, ಎಸ್ಐಗಳಾದ ಅಂಬರೀಶ ವಾಘಮೋಡೆ, ನಾಗೇಂದ್ರ ಉಪಸ್ಥಿತರಿದ್ದರು.
ವ್ಯವಸ್ಥೆ: ಠಾಣೆಯ ಒಳ ಕೊಠಡಿಯೊಂದರಲ್ಲಿ ಮಕ್ಕಳ ಆರೈಕೆ ಮತ್ತು ಸುರಕ್ಷತೆ ಒದಗಿಸುವುದಕ್ಕಾಗಿ ಕೇಂದ್ರ ರೂಪಿಸಿ, ವಿವಿಧ ಆಟಿಕೆ ಸಾಮಾನುಗಳನ್ನು ಇಡಲಾಗಿದೆ. ಬಿಸ್ಕತ್ತು, ಚಾಕೊಲೇಟ್ಗಳನ್ನು ಸಹ ಇಲ್ಲಿ ಇಡಲಾಗಿದೆ. ಗೋಡೆ ಮೇಲೆ ವಿವಿಧ ಪ್ರಾಣಿ ಪಕ್ಷಿಗಳ ಚಿತ್ರ ಬಿಡಿಸಲಾಗಿದೆ. ಇಂಗ್ಲಿಷ್ ಮೂಲಾಕ್ಷರ, ಅಂಕಿ ಸಂಖ್ಯೆಗಳನ್ನು ಬರೆಯಲಾಗಿದೆ. ದೂರು ನೀಡುವುದಕ್ಕೆ ಠಾಣೆಗೆ ಬರುವ ಪೊಷಕರ ಜತೆಯಲ್ಲಿನ ಮಕ್ಕಳ ಮತ್ತು ನಾಪತ್ತೆಯಾಗಿ ಪೊಲೀಸರ ಸುಪರ್ದಿಗೆ ನೀಡಲಾಗುವ ಮಕ್ಕಳನ್ನು ಇಲ್ಲಿ ಆರೈಕೆ ಮಾಡಲಾಗುತ್ತದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ