News Karnataka Kannada
Sunday, April 28 2024
ಬೀದರ್

ಔರಾದ: ಅಂಬೇಡ್ಕರ್ ಅವರ ತತ್ವ, ಸಿದ್ಧಾಂತ ಸದಾ ಪ್ರಸ್ತುತ

Aurad: Ambedkar's philosophy is always relevant.
Photo Credit : News Kannada

ಔರಾದ: ಶೋಷಿತ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳು ಇಂದಿನ ಜೀವನಕ್ಕೆ ಪ್ರಸ್ತುತವಾಗಿವೆ ಎಂದು ತಾಲ್ಲೂಕು ಯೋಜನಾಧಿಕಾರಿ ರತಿಕಾಂತ್ ನೆಳೆಗೆ ಹೇಳಿದರು.

ತಾಲ್ಲೂಕಿನ ವಡಗಾಂವ ದೇ ಗ್ರಾಮದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಮಾಡುವುದು ಎಲ್ಲರ ಕರ್ತವ್ಯವಾಗಿದ್ದು 18 ವರ್ಷ ಮೇಲ್ಪಟ್ಟ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕು. ನಿಮ್ಮ ಮತ ಅತ್ಯಂತ ಅಮೂಲ್ಯವಾಗಿದೆ ಎಂದು ಮತದಾನ ಕುರಿತು ಜಾಗೃತಿ ಮೂಡಿಸಿದರು. ಅಂಬೇಡ್ಕರ್‌ ಅವರು ಅಸಮಾನತೆಯ ವಿರುದ್ಧ ಹೋರಾಡಿದರು. ಶೋಷಿತರ ಪರವಾದ ಸಂವಿಧಾನ ರಚಿಸಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದರು ಎಂದು ತಿಳಿಸಿದರು.

ಪಿಡಿಒ ವಿನೋದ್ ಕುಮಾರ್ ಕುಲಕರ್ಣಿ ಮಾತನಾಡಿ, ಅಂಬೇಡ್ಕರ್ ಅವರು ಎಲ್ಲ ವರ್ಗದವರ ಅಭಿವೃದ್ಧಿಗೆ ಶ್ರಮಿಸಿದರು. ಬೌದ್ಧ ಧರ್ಮದ ತತ್ವ, ಸಿದ್ಧಾಂತ ತಿಳಿದು ಬೌದ್ಧ ಧರ್ಮ ಸ್ವೀಕರಿಸಿದರು. ಅವರ ಅನುಯಾಯಿಗಳು ಬೌದ್ಧ ಧರ್ಮದ ಅಹಿಂಸಾ ಮಾರ್ಗದಲ್ಲಿ ನಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಪಿಡಿಒ ವಿನೋದ್ ಕುಲಕರ್ಣಿ, ಸುಭಾಷ್ ಗ್ರಾಮ ಪಂಚಾಯತ್ ಸದಸ್ಯರಾದ ರಾಜಕುಮಾರ ಹೇಡೆ, ರವಿ ಗಂಗಾ, ಜೈವಂತ್, ಹಾಗೂ ಊರಿನ ಮುಖಂಡರಾದ ಝರೆಪ್ಪಾ ಸಿಂಗೆ, ಸಂಜು ಚವ್ಹಾಣ್, ಬಸವರಾಜ ಅಗನೂರೆ, ರಾಜು ಅಗನೂರೆ, ನಾಗನಾಥ್ ಅಗನೂರೆ, ಮಾರುತಿ ಅಡಕೆ, ತುಕರಾಮ್ ಅಡಕೆ, ಪುಂಡಲಿಕ ಅಡಕೆ, ರಾಜು ಅಡಕೆ, ಸಂಜು ಅಡಕೆ, ಗಣಪತಿ, ಓಂಕಾರ್ ಮೇತ್ರೆ, ಚಂದ್ರಕಾಂತ ನೆಳಗೆ, ಆಕಾಶ ಚಾಂಬಳೆ ಸೇರಿದಂತೆ ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು