ಬೀದರ್

ಔರಾದ: ಬಿಜೆಪಿ ಅಭ್ಯರ್ಥಿ ಸಚಿವ ಪ್ರಭು.ಬಿ ಚವ್ಹಾಣ ಪರ ಭರ್ಜರಿ ಮತಯಾಚನೆ

ಔರಾದ: ಚುನಾವಣಾ ಪ್ರಚಾರಕ್ಕಾಗಿ ಜಿಲ್ಲೆಗೆ ಆಗಮಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ನಾರಾಯಣ ರಾಣೆ ಅವರು ಬುಧವಾರ ಔರಾದ(ಬಿ) ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಬಿಜೆಪಿ ಅಭ್ಯರ್ಥಿ ಸಚಿವ ಪ್ರಭು.ಬಿ ಚವ್ಹಾಣ ಪರವಾಗಿ ಭರ್ಜರಿ ಮತಯಾಚನೆ ಮಾಡಿದರು.

ಸಂತಪೂರ, ಹೆಡಗಾಪೂರ, ರಕ್ಷ್ಯಾಳ, ಠಾಣಾಕುಶನೂರ ಸೇರಿದಂತೆ ವಿವಿಧೆಡೆ ಸಂಚರಿಸಿ ಮಹನಿಯರ ಪ್ರತಿಮೆಗಳಿಗೆ ಮಾಲಾರ್ಪಣೆ ಸಲ್ಲಿಸಿ ಗೌರವ ಸಮರ್ಪಿಸಿದರು. ಬಳಿಕ ಗ್ರಾಮಗಳಲ್ಲಿರುವ ದೇವಸ್ಥಾನಗಳು ಮತ್ತು ಧಾರ್ಮಿಕ ಗುರುಗಳನ್ನು ಭೇಟಿಯಾಗಿ ದರ್ಶನ ಪಡೆದರು.

ಹೆಡಗಾಪೂರ ಗ್ರಾಮದಲ್ಲಿ ಶಂಭುಲಿಂಗೇಶ್ವರ ಮಠಕ್ಕೆ ಭೇಟಿ ನೀಡಿ ಪೂಜ್ಯ ಶಿವಲಿಂಗ ಶಿವಾಚಾರ್ಯರು, ಸ್ವಾಮಿ ವಿವೇಕಾನಂದ ಆಶ್ರಮಕ್ಕೆ ತೆರಳಿ ಪೂಜ್ಯ ಮುರುಳಿಧರ ಮಹಾರಾಜರ ದರ್ಶನ ಪಡೆದು ಆಶೀರ್ವಾದ ಪಡೆಯಲಾಯಿತು. ಸಂತಪೂರ, ಠಾಣಾಕುಶನೂರ, ಮುಧೋಳ ಹಾಗೂ ದಾಬಕಾನನಲ್ಲಿ ಬಸವೇಶ್ವರರು, ಶಿವಾಜಿ ಮಹಾರಾಜರು, ಡಾ.ಬಿ.ಆರ್ ಅಂಬೇಡ್ಕರ್, ಬೊಮ್ಮಗೊಂಡೇಶ್ವರ ಸೇರಿದಂತೆ ವಿವಿಧ ಮಹನೀಯರ ಪ್ರತಿಮೆಗಳಿಗೆ ಪೂಜೆ ಹಾಗೂ ಮಾಲಾರ್ಪಣೆ ಸಲ್ಲಿಸಿ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ವಸಂತ ಬಿರಾದಾರ, ಸತೀಷ ಪಾಟೀಲ, ಶಿವಾಜಿ ಪಾಟೀಲ ಮುಂಗನಾಳ, ಕಿರಣ ಪಾಟೀಲ, ವಿಠಲರೆಡ್ಡಿ ಬುರುಡೆ, ವಿಲಾಸ ಗುರೂಜಿ, ರಾಜೇಶ ಶಳ್ಕೆ, ಬಾಲಾಜಿ ನಾಯಕ್, ಉಮೇಶ ನಾಯಕ್, ಬಾಬುರಾವ ಜಾಧವ ಸೇರಿದಂತೆ ಇತರರು ಇದ್ದರು.

Gayathri SG

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

21 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

37 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

49 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago