News Karnataka Kannada
Sunday, May 12 2024
ಬೀದರ್

ಔರಾದ: ನಿಯತ್ತಿನಿಂದ ಕೆಲಸ ಮಾಡಿ ಇಲ್ಲ ಕುರ್ಚಿ ಖಾಲಿ ಮಾಡಿ- ಕರವೇ

Aurad: Do Work regularly or vacate the chair.
Photo Credit : News Kannada

ಔರಾದ: ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಅನಿಲ್ ಹೆಡೆ ನೇತೃತ್ವದಲ್ಲಿ ತಾಲೂಕು ಉಪ ನೋಂದಣಿ ಅಧಿಕಾರಿಯನ್ನು ವರ್ಗಾವಣೆ ಮಾಡ ಬೇಕೆಂದು ಜಿಲ್ಲಾ ಉಪನೊಂದನಾಧಿಕಾರಿಗಳಿಗೆ ತಹಶೀಲ್ದಾರ್ ಮುಖಾಂತರ ಮನವಿ ಸಲ್ಲಿಸಲಾಯಿತು.

ನಂತರ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ವಕ್ತಾರ ಹಣಮಂತ ದೇಶಮುಖ್ ಮಾತನಾಡಿ, ಔರಾದ ತಾಲೂಕಿನಲ್ಲಿ ಭ್ರಷ್ಟಾಚಾರ ತಾಂಡವ ವಾಡುತ್ತಿದೆ.

ಉಪ ನೋಂದಣಿ ಅಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ, ಕೂಲಿ ಕಾರ್ಮಿಕರ ಮತ್ತು ರೈತರ ಕೆಲಸಗಳು ಲಂಚ ಇಲ್ಲದೆ ಯಾವುದೇ ಸರ್ಕಾರಿ ಕೆಲಸಗಳು ಆಗುತ್ತಿಲ್ಲ, ನಿಯತ್ತಿನಿಂದ ಕೆಲಸ ಮಾಡಬೇಕು ಇಲ್ಲ ಕುರ್ಚಿ ಖಾಲಿ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ಕೂಡಲೇ ಉಪ ನೋಂದಣಾಧಿಕಾರಿಗೆ ವರ್ಗಾವಣೆಗೊಳಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡಲಾಗುವುದು ಎಂದು ಕರವೇ ಮುಖಂಡರು ತಿಳಿಸಿದರು.

ಈ ಸಂದರ್ಭದಲ್ಲಿ ಕರವೇ ಪ್ರಮುಖರಾದ ಮಹೇಶ್ ಸ್ವಾಮಿ, ವಿವೇಕ್ ನಿರ್ಮಳೆ, ಅಮಿತ್ ಶಿವಪೂಜೆ , ಬಾಲಾಜಿ ಧಾಮ ,ಚಂದು ಡಿಕೆ, ಶಿವು ದೇಶಮುಖ್, ಇರ್ಷಾದ್,ಸಂತೋಷ್ ಚವ್ಹಾಣ, ಹರೀಶ್ ,ಸತೀಶ್ ಫುಲ್ಲರಿ ಅನೇಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು