Categories: ಬೀದರ್

ಔರಾದ: ಕನ್ನಡ ನಾಮಫಲಕ ಅಳವಡಿಸಲು ಕರವೇ ಒತ್ತಾಯ

ಔರಾದ: ಪಟ್ಟಣದ ಎಲ್ಲಾ ಅಂಗಡಿ ಮುಗ್ಗಟ್ಟುಗಳ ಮೇಲೆ ಕನ್ನಡದಲ್ಲಿ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ತಾಲ್ಲೂಕು ಕರವೇ ಒತ್ತಾಯಿಸಿದೆ.

ಸ್ಥಳೀಯ ಪಟ್ಟಣ ಪಂಚಾಯತ್‌ ಮುಖ್ಯ ಅಧಿಕಾರಿಗೆ ಮನವಿಪತ್ರ ಸಲ್ಲಿಸಿದರು. ಕನ್ನಡ ನಾಡಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡುವ ಜವಾಬ್ದಾರಿ ಕೂಡ ನಿಮ್ಮದಾಗಿದ್ದು, ಎಲ್ಲ ಅಂಗಡಿ ಮುಗ್ಗಟ್ಟುಗಳ ಮಾಲೀಕರನ್ನು ಕರೆಸಿ ಕನ್ನಡ ನಾಮ ಫಲಕ ಅಳವಡಿಸಲು ಎಚ್ಚರಿಕೆ ನೀಡಬೇಕು. ಕೇವಲ ವ್ಯಾಪಾರಿ ಅಂಗಡಿಗಳ ನಾಮಫಲಕ ಬದಲಾಯಿಸುವುದರಿಂದ ಕನ್ನಡ ಅನುಷ್ಠಾನಕ್ಕೆ ಬರುವುದಿಲ್ಲ. ಕನ್ನಡ ಸಾಹಿತ್ಯ ಪರಿಷತ್ತು, ಜನಪದ ಸಾಹಿತ್ಯ ಪರಿಷತ್ತು ಮತ್ತು ಇತರ ಸಾಹಿತ್ಯ ಪರಿಷತ್ತುಗಳು, ಕನ್ನಡಪರ ಸಂಘಟನೆಗಳು ಕನ್ನಡ ಅನುಷ್ಠಾನಕ್ಕೆ ತರಲು ಶ್ರಮಿಸಬೇಕಾಗಿದೆ. ಶಾಲಾ ಕಾಲೇಜುಗಳ ನಾಮಫಲಕ, ವಾಹನಗಳ ಸಂಖ್ಯೆ ಫಲಕ, ಕನ್ನಡದಲ್ಲಿ ಪತ್ರ ವ್ಯವಹಾರ, ನ್ಯಾಯಾಂಗ ವ್ಯವಸ್ಥೆ, ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಸಂಸ್ಥೆಗಳು ಸೇರಿ ಪ್ರತಿಯೊಂದರಲ್ಲಿ ಕಡ್ಡಾಯವಾಗಿ ಕನ್ನಡ ಅಳವಡಿಸುವಂತೆ  ಸೂಚಿಸಬೇಕು.

ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಪರವಾಗಿ ಮುಂದಿನ ದಿನಗಳಲ್ಲಿ ಔರಾದ ಪಟ್ಟಣದಲ್ಲಿ ಕನ್ನಡದ ಅಕ್ಷರಗಳು ಕಾಣದ ನಾಮಫಲಕಗಳಿಗೆ ಮಸಿ ಬಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕಾಧ್ಯಕ್ಷ ಅನೀಲ್ ದೇವ ಕತ್ತೆ, ನಗರಘಟಕ ಅಧ್ಯಕ್ಷ ಬಾಲಾಜಿ ದಾಮ, ತಾಲ್ಲೂಕು ಉಪಾಧ್ಯಕ್ಷ ನರ್ಸಿಂಗ್ ಹಕ್ಕೆ, ಆಕಾಶ ಮೇತ್ರಿ, ಪಾಂಡ್ರೆ, ಗಣೇಶ್, ನಾಗೇಶ್ ಸೇರಿದಂತೆ ಇತರರಿದ್ದರು.

Ashika S

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

5 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

5 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

6 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

6 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

6 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

7 hours ago