News Karnataka Kannada
Monday, May 06 2024
ಬೀದರ್

ಔರಾದ: ಸಚಿವ ಪ್ರಭು.ಬಿ ಚವ್ಹಾಣರಿಂದ ಬೆಳೆ ಹಾನಿ ವೀಕ್ಷಣೆ

Aurad: Minister Prabhu B Chavan inspects crop damage
Photo Credit : News Kannada

ಔರಾದ: ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಇಂದು ಔರಾದ(ಬಿ) ವಿಧಾನಸಭಾ ಕ್ಷೇತ್ರದ ಕೋರೆಕಲ್, ಹೆಡಗಾಪೂರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ಬೆಳೆ ಹಾನಿಯನ್ನು ವೀಕ್ಷಿಸಿ ರೈತರ ಸಮಸ್ಯೆಗಳನ್ನು ಆಲಿಸಿದರು.

ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು, ಹಾನಿ ಪ್ರಮಾಣದ ಬಗ್ಗೆ ರೈತರಿಂದ ಮಾಹಿತಿ ಪಡೆದರು. ಜಂಟಿ ಸಮೀಕ್ಷೆ ನಡೆಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ರೈತರು ಆತಂಕಪಡಬಾರದು. ಬೆಳೆಹಾನಿಯಾದ ರೈತರಿಗೆ ಸರ್ಕಾರದಿಂದ ಅಗತ್ಯ ಪರಿಹಾರ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಆಲಿಕಲ್ಲು ಸಮೇತ ಸುರಿದ ಭಾರೀ ಮಳೆಯಿಂದ ಹಲವೆಡೆ ಜೋಳ, ಕುಸುಬೆ, ಟೊಮ್ಯಾಟೊ, ಈರುಳ್ಳಿ, ಮೆಣಸಿನ ಕಾಯಿ ಹೀಗೆ ಸಾಕಷ್ಟು ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ನಷ್ಟವಾಗಿವೆ. ಅಧಿಕಾರಿಗಳು ಬೆಳೆಹಾನಿಯಾದ ಹೊಲಗಳಿಗೆ ಭೇಟಿ ನೀಡಿ ನಿಖರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಕಮಲಗರ ತಹಸೀಲ್ದಾರರಾದ ಮಲ್ಲಿಕಾರ್ಜುನ, ಕೆ.ನಾಗರಾಜ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶ್ರೀಮಂತ ಪಾಟೀಲ, ರಾಜಕುಮಾರ ಸೋರಳ್ಳೆ, ಶಿವಲಿಂಗ ಚಿಟ್ಟಾ, ಮನೋಹರ ಹೂಗಾರ, ಬಸವರಾಜ ಹಲ್ಬುರ್ಗೆ, ರಾಜಪ್ಪ ಯರನಾಳೆ, ವಿಜಯಕುಮಾರ, ಲಾಲಹ್ಮದ ಬಾಗವಾನ್, ಮಹಾದೇವ ಕುಣಿಕೇರೆ, ಪ್ರದೀಪ ದೇಸಾಯಿ, ಹಣಮಂತ ಯರನಾಳೆ, ರಮೇಶ ಶಟಕಾರ, ಅಣ್ಣೆಪ್ಪ ಗಂದಗೆ, ಶಂಕ್ರಯ್ಯಾ ಸ್ವಾಮಿ, ಪ್ರಕಾಶ ಬೆಳಕುಣಿ, ಧನರಾಜ ಬೆಳಕುಣಿ, ಮಲ್ಲಪ್ಪ ರಾಮಶೆಟ್ಟೆ, ಮಾಂತೇಶ ಸಂತಪೂರೆ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು