News Karnataka Kannada
Monday, April 29 2024
ಬೀದರ್

ಔರಾದ: ಬೆಳೆ ಹಾನಿ ಪರಿಶೀಲಿಸದ ಸಚಿವ ಪ್ರಭು ಚೌಹಾಣ್

Aurad: Minister Prabhu Chauhan fails to inspect crop damage
Photo Credit : News Kannada

ಔರಾದ: ಗ್ರಾಮ ಸಂಚಾರದ ಸಂದರ್ಭದಲ್ಲಿ ಸಚಿವರು ನಿಡೋದಾ ಗ್ರಾಮದಲ್ಲಿ ಅಕಾಲಿಕ ಮಳೆಯಿಂದ ಹಾನಿಯಾದ ರೈತರ ಕೃಷಿ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದರು.

ಕೆಲವು ದಿನಗಳ ಹಿಂದೆ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಗೆ ಬೆಳೆದು ನಿಂತ ಗೋಧಿ ಸಂಪೂರ್ಣ ಉದುರಿ ಹಾನಿಯಾಗಿದೆ. ಸುತ್ತಲಿನ ಹೊಲಗಳಲ್ಲಿ ಬೆಳೆದ ಜೋಳ, ಕುಸುಬೆ, ಟೊಮ್ಯಾಟೊ ಹಾಗೂ ಮತ್ತಿತರೆ ಬೆಳೆಗಳು ನೆಲಕ್ಕುರುಳಿವೆ ಎಂದು ರೈತರು ಸಚಿವರ ಗಮನಕ್ಕೆ ತಂದರು.

ಈ ವೇಳೆ ಸಚಿವರು ಮಾತನಾಡಿ, ಅಕಾಲಿಕ ಮಳೆಯಿಂದ ಕ್ಷೇತ್ರದಲ್ಲಿ ಉಂಟಾಗಿರುವ ಬೆಳೆ ಹಾನಿಯ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸಲಾಗುತ್ತದೆ. ಸರ್ಕಾರ ನಿಮ್ಮೊಂದಿಗಿದೆ. ನಾನು ನಿಮ್ಮ ಜೊತೆಗಿದ್ದೇನೆ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು