News Karnataka Kannada
Monday, May 06 2024
ಬೀದರ್

ಔರಾದ: ಬೆಳಕುಣಿ.ಬಿ ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಭು ಚವ್ಹಾಣ

Aurad: Minister Prabhu Chavan inspects work on The Lighting B Bridge
Photo Credit : News Kannada

ಔರಾದ: ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಬೆಳಕುಣಿ.ಬಿ‌ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಸಚಿವರು ಭೇಟಿ ನೀಡಿದ ವೇಳೆ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಇರದೇ ಇರುವುದನ್ನು ಕಂಡು ಗರಂ ಆದ‌ ಸಚಿವರು ಲೋಕೋಪಯೋಗಿ ಇಲಾಖೆಯ ಅಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ತರಾಟೆಗೆ ತೆಗೆದುಕೊಂಡರು.

ಔರಾದ ಮತ್ತು ಕಮಲನಗರ ತಾಲ್ಲೂಕುಗಳನ್ನು ಸಂಪರ್ಕಿಸುವ ಪ್ರಮುಖ ಸೇತುವೆ ಇದಾಗಿದೆ. ಈ ಸೇತುವೆ ಶಿಥಿಲಗೊಂಡಿದ್ದರಿಂದ ಪ್ರತಿ ಬಾರಿ ಮಳೆಗಾಲದಲ್ಲಿ ನೀರು ರೈತರ ಹೊಲಗಳಿಗೆ ನುಗ್ಗಿ ಸಾಕಷ್ಟು ಬೆಳೆ ಹಾನಿ ಸಂಭವಿಸುತ್ತಿತ್ತು. ಸಾರ್ವಜನಿಕರ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತಿತ್ತು. ಹಾಗಾಗಿ ಸರ್ಕಾರದಿಂದ ವಿಶೇಷ ಅನುದಾನ ತರಿಸಿಕೊಂಡು ಕೆಲಸ ಆರಂಭಿಸಲಾಗಿದೆ. ಈ ಕೆಲಸ ಗುಣಮಟ್ಟದಿಂದ ಆಗಬೇಕು ಎಂದು ನಿರ್ದೇಶನ ನೀಡಿದರು.

ಈ ಕೆಲಸದ ಮೇಲೆ ನಿಗಾ ವಹಿಸಲು ಅಧಿಕಾರಿಯೊಬ್ಬರನ್ನು ನೇಮಿಸಿ ಕೆಲಸ ಪೂರ್ಣಗೊಳ್ಳುವ ವರೆಗೆ ಕಾಮಗಾರಿ ಸ್ಥಳದಲ್ಲಿದ್ದು, ಕಾಮಗಾರಿ ಸರಿಯಾಗಿ ಆಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ ಸಚಿವರು ಕಾಮಗಾರಿ ಕಳಪೆಯಾದರೆ ಯಾವುದೇ ಕಾರಣಕ್ಕೂ ಸುಮ್ಮನಿರಲ್ಲ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ದೊಂಡಿಬಾ ನರೋಟೆ, ಸಚಿನ್ ರಾಠೋಡ್, ಹಣಮಂತ ಸುರನಾರ, ಖಂಡೋಬಾ ಕಂಗಟೆ ಹಾಗೂ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು