News Karnataka Kannada
Sunday, May 12 2024
ಬೀದರ್

ಔರಾದ: ಸಚಿವ ಪ್ರಭು‌ ಚವ್ಹಾಣರಿಂದ ಕಾಮಗಾರಿ ಪರಿಶೀಲನೆ

Aurad: Minister Prabhu Chavan inspects works
Photo Credit : News Kannada

ಔರಾದ: ಪಶು ಸಂಗೋಪನೆ ಸಚಿವರಾದ ಪ್ರಭು.ಬಿ‌‌ ಚವ್ಹಾಣ ಅವರು ಔರಾದ ವಿಧಾನಸಭಾ ಕ್ಷೇತ್ರದ ಖೇರ್ಡಾ ಹಾಗೂ ಸೋನಾಳ ಗ್ರಾಮದಲ್ಲಿ ಸಂಚರಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಖೇರ್ಡಾ ಗ್ರಾಮದಲ್ಲಿ ನಡೆಯುತ್ತಿದ್ದ ಚರಂಡಿ ಮತ್ತು ಸಿಡಿ ಕಾಮಗಾರಿಯ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಕೆಲಸದ ಗುಣಮಟ್ಟವನ್ನು ವೀಕ್ಷಿಸಿದರು. ಸಂಬಂಧಿಸಿದ ಅಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕೆಲಸ ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಿಂದ ಕೂಡಿರಬೇಕು. ಇಲಾಖೆ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೆಲಸ ಸರಿಯಾಗಿ ಆಗುವಂತೆ ನೋಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿ ಪಾಟೀಲ ಮುಂಗನಾಳ, ದೋಂಡಿಬಾ ನರೋಟೆ, ಅನೀಲ ಬಿರಾದಾರ, ಪ್ರತೀಕ್ ಚವ್ಹಾಣ, ಅಮೀತ್ ರಾಠೋಡ, ಸಚಿನ ರಾಠೋಡ, ಧನಾಜಿ ರಾಠೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು