ಔರಾದ : ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಪ್ರಭು ಚೌಹಾಣ್ ಸುಪುತ್ರ ಪ್ರತೀಕ್ ಚೌಹಾಣ್ ಅವರಿಗೆ ಮುತ್ತಿಗೆ ಹಾಕಿದ ಘಟನೆ ಔರಾದ ತಾಲೂಕಿನ ವಡಗಾಂವ ದೇ ಗ್ರಾಮದಲ್ಲಿ ನಡೆದಿದೆ.
ಸಾರ್ವಜನಿಕರ ಭೇಟಿ ಹಾಗೂ ಔರಾದ ಕ್ಷೇತ್ರದ ಅಭಿವೃದ್ಧಿಗಾಗಿ ಸಾರ್ವಜನಿಕರಿಂದ ಸಲಹೆ ಸ್ವೀಕರಿಸಲು ವಡಗಾಂವ ದೇ ಗ್ರಾಮಕ್ಕೆ ಆಗಮಿಸಿದಾಗ ಈ ಘಟನೆ ಜರುಗಿದೆ. ಜೆ.ಜೆ.ಎಮ್ ಕೆಲಸ ಆರಂಭವಾಗಿ ಸುಮಾರು ನಾಲ್ಕರಿಂದ ಐದು ತಿಂಗಳು ಕಳೆದಿವೆ. ಐದು ತಿಂಗಳಿಂದ ವಾರ್ಡ್ ನಂ.1 ರಲ್ಲಿ ಹನಿ ನೀರಿಲ್ಲದೆ ಜನರು ಪರದಾಡುತ್ತಿದ್ದೇವೆ. ಗ್ರಾಪಂ ಪಿಡಿಓ ಹಾಗೂ ಅಧ್ಯಕ್ಷ, ಸದಸ್ಯರಿಗೆ ನಮ್ಮ ಸಮಸ್ಯೆ ಹೇಳಿದರು ಯಾವುದೇ ಪ್ರಯೋಜನ ವಾಗಿಲ್ಲ, ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವಂತೆ ಮಹಿಳೆಯರು ಆಕ್ರೋಶ ಹೊರಹಾಕಿದರು.
ಜನರ ಸಮಸ್ಯೆ ಕೇಳುವುದಕ್ಕಾಗಿ ನಾನು ಗ್ರಾಮ ಸಂಚಾರ ಮಾಡುತ್ತಿದ್ದೇನೆ. ಒಂದು ವಾರದಲ್ಲಿ ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ ಎಂದು ಪ್ರತೀಕ್ ಚೌಹಾಣ್ ಭರವಸೆ ನೀಡಿದರು. ಒಂದು ವಾರದಲ್ಲಿ ನಮ್ಮ ಗ್ರಾಮಕ್ಕೆ ನೀರು ಬರದಿದ್ದರೆ ನಿಮ್ಮ ಮನೆಗೆ ಬಂದು ಮುತ್ತಿಗೆ ಹಾಕುತ್ತೇವೆ ಎಂದು ಗ್ರಾಮದ ಮಹಿಳೆಯರು ಎಚ್ಚರಿಕೆ ನೀಡಿದರು.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…