ಬೀದರ್

ಬಸವಕಲ್ಯಾಣ: ವಿಜಯ ಸಂಕಲ್ಪ ಯಾತ್ರೆ – ಎಲ್ಲೆಡೆ ಬಿಜೆಪಿ ಧ್ವಜಗಳು , ರಸ್ತೆ ಕೇಸರಿಮಯ

ಬಸವಕಲ್ಯಾಣ: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ನಗರ ಸಜ್ಜಾಗಿದೆ. ನಗರದೆಲ್ಲೆಡೆ ಬಿಜೆಪಿ ಧ್ವಜ ಮತ್ತು ಕಟೌಟ್ ಗಳು ರಾರಾಜಿಸುತ್ತಿವೆ. ಕೇಸರಿ ಬಣ್ಣದ ಬಟ್ಟೆಯ ಸ್ವಾಗತ ಕಮಾನುಗಳಿಂದ ರಸ್ತೆಗಳು ಕೇಸರಿಮಯವಾಗಿವೆ.

ನಗರದ ರಥ ಮೈದಾನದಲ್ಲಿ ಬಹಿರಂಗ ಸಭೆಗಾಗಿ ಬೃಹತ್ ಮಂಟಪ ಮತ್ತು ವೇದಿಕೆ ಸಿದ್ಧಗೊಂಡಿದೆ.

ಎದುರಲ್ಲಿ ಅರಮನೆ ಶೈಲಿಯ ಮಹಾದ್ವಾರ ಕಂಗೊಳಿಸುತ್ತಿದೆ. ಇಲ್ಲಿಯೇ ಸಮೀಪದಲ್ಲಿರುವ ಅಕ್ಕ ಮಹಾದೇವಿ ಕಾಲೇಜಿನ ಆವರಣದಲ್ಲಿ ಎಲ್ಲರ ಊಟದ ವ್ಯವಸ್ಥೆಗಾಗಿ ಶಾಮಿಯಾನಾ ಹಾಕಲಾಗಿದೆ.

ಸಸ್ತಾಪುರ ಬಂಗ್ಲಾ ರಾಷ್ಟ್ರೀಯ ಹೆದ್ದಾರಿಯಿಂದ ನಗರ ಪ್ರವೇಶಿಸುವ ಮುಖ್ಯ ರಸ್ತೆಯ ಮಧ್ಯದ ದ್ವಿಭಾಜಕದಲ್ಲಿನ ಪ್ರತಿ ವಿದ್ಯುತ್ ಕಂಬಗಳಿಗೆ ಕಟೌಟ್ ಕಟ್ಟಲಾಗಿದೆ. ರಸ್ತೆಯ ಪಕ್ಕದಲ್ಲಿ ಎರಡೂ ಕಡೆ ಕಟ್ಟಿಗೆಯ ಕೋಲುಗಳನ್ನು ಅಳವಡಿಸಿ ಬಿಜೆಪಿ ಧ್ವಜಗಳನ್ನು ಕಟ್ಟಲಾಗಿದೆ. ಡಾ.ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಅಲ್ಲಲ್ಲಿ ಅಂತರ ಬಿಟ್ಟು ಕಮಾನುಗಳನ್ನು ನಿರ್ಮಿಸಲಾಗಿದೆ. ತ್ರಿಪುರಾಂತದ ಬಿಜೆಪಿ ಕಚೇರಿ ಮತ್ತಿತರೆಡೆ ಅಮಿತ್ ಶಾ ಹಾಗೂ ಇತರರ ಭಾವಚಿತ್ರಗಳಿರುವ ದೊಡ್ಡ ದೊಡ್ಡ ಬಲೂನ್ ಗಳನ್ನು ಕಟ್ಟಲಾಗಿದೆ.

ಬೀದರ್ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 12.10 ಗಂಟೆಗೆ ನಗರದಲ್ಲಿನ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುವರು. ನಂತರ ಅನುಭವ ಮಂಟಪದಲ್ಲಿ ಯಾತ್ರೆ ಉದ್ಘಾಟಿಸುವರು. ಅದಾದಮೇಲೆ ವಾಹನದ ಮೂಲಕ ರಥ ಮೈದಾನಕ್ಕೆ ಹೋಗುವರು. ಅಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡುವರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ ಖೂಬಾ, ಪಶು ಸಂಗೋಪನಾ ಸಚಿವ ಪ್ರಭು ಚವಾಣ್, ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ಪಾಲ್ಗೊಳ್ಳಲಿದ್ದಾರೆ.

‘ಕಾರ್ಯಕ್ರಮದಲ್ಲಿ 60 ಸಾವಿರ ಜನರು ಪಾಲ್ಗೊಳ್ಲುವ ನಿರೀಕ್ಷೆ ಇದೆ’ ಎಂದು ಶಾಸಕ ಶರಣು ಸಲಗರ ತಿಳಿಸಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

27 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

48 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago