Categories: ಬೀದರ್

ಲೋಕಸಭೆ ಚುನಾವಣೆ: ₹ 9.09 ಲಕ್ಷದ ಸಾಲಗಾರ ಭಗವಂತ ಖೂಬಾ

ಬೀದರ್ : ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆದ ಕೇಂದ್ರ ಸಚಿವ ಭಗವಂತ ಖೂಬಾ ಅವರು ನಗರದ ಎಸ್‌ಬಿಐ ಬ್ಯಾಂಕಿನಲ್ಲಿ ₹9.09 ಲಕ್ಷ ವೈಯಕ್ತಿಕ ಸಾಲ ಹೊಂದಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ನಗರದಲ್ಲಿ ಸೋಮವಾರ ಚುನಾವಣಾಧಿಕಾರಿಗೆ ಅವರು ನಾಮಪತ್ರ ಸಲ್ಲಿಸಿದ್ದು, ಅದರೊಂದಿಗೆ ಅವರು ಘೋಷಿಸಿಕೊಂಡಿರುವ ಆಸ್ತಿ ವಿವರದಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ.

57 ವರ್ಷ ವಯಸ್ಸಿನ ಖೂಬಾ ಅವರು ತುಮಕೂರಿನ ಸಿದ್ದಗಂಗಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಮೆಕ್ಯಾನಿಕಲ್‌ ಎಂಜಿನಿಯರ್‌ ಪದವಿ ಪೂರೈಸಿದ್ದಾರೆ. ಜಿಲ್ಲೆಯ ಔರಾದ್‌ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದಾರೆ. ಇವರಿಗೆ ಪತ್ನಿ ಶೀಲಾ, ಅಶುತೋಷ ಖೂಬಾ, ವಸುಂಧರಾ ಖೂಬಾ, ಮಣಿಕರ್ಣಿಕಾ ಖೂಬಾ ಸೇರಿ ಮೂವರು ಮಕ್ಕಳಿದ್ದಾರೆ.

ಕೇಂದ್ರ ಸಚಿವರಾಗಿದ್ದರೂ ಖೂಬಾ ಅವರ ಹೆಸರಿನಲ್ಲಿ ಸ್ವಂತ ಮನೆ ಇಲ್ಲ. ಅವರ ಪತ್ನಿ ಶೀಲಾ ಅವರ ಹೆಸರಲ್ಲಿ ಬೀದರ್‌ನ ಶಿವನಗರದಲ್ಲಿ ₹30 ಲಕ್ಷ ಬೆಲೆ ಬಾಳುವ 80X60 ಅಡಿ ಅಳತೆಯ ಮನೆ ಇದೆ. ಖೂಬಾ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಯಾವುದೇ ಅಪರಾಧಿಕ ಪ್ರಕರಣಗಳಿಲ್ಲ.

ಖೂಬಾ ಅವರ ಬಳಿ ನಗದು ₹8 ಲಕ್ಷ ಇದ್ದರೆ, ಅವರ ಪತ್ನಿ ಶೀಲಾ ಅವರ ಕೈಯಲ್ಲಿ ₹5 ಲಕ್ಷ ನಗದು ಹಣವಿದೆ. ಒಂದು ಇನ್ನೊವಾ, ಒಂದು ಪಿಕ್‌ಅಪ್‌ ವಾಹನ ಹೊಂದಿದ್ದಾರೆ. ಎಲ್‌ಐಸಿ, ಬಾಂಡ್‌, ಚಿನ್ನಾಭರಣ ಸೇರಿದಂತೆ ಒಟ್ಟು ₹71.54 ಲಕ್ಷ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅವರ ಪತ್ನಿ ₹26.26 ಲಕ್ಷ ಚರಾಸ್ತಿಯ ಒಡತಿ.

ಖೂಬಾ ಬಳಿ ₹4.25 ಲಕ್ಷ ಮೌಲ್ಯದ 60.2 ಗ್ರಾಂ ಚಿನ್ನ, ₹3.60 ಲಕ್ಷ ಬೆಲೆಬಾಳುವ ಕೈ ಗಡಿಯಾರ ಇದೆ. ₹79.54 ಲಕ್ಷ ಮೌಲ್ಯದ ಒಟ್ಟು ಚರಾಸ್ತಿ ಇದೆ. ಪತ್ನಿ ಹೆಸರಲ್ಲಿ ₹31.26 ಲಕ್ಷ ಚರಾಸ್ತಿ ಇದೆ.

₹3.07 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ₹1.65 ಕೋಟಿ ಸ್ಥಿರಾಸ್ತಿ ಮಾಲೀಕರು.

ಬೀದರ್‌, ಔರಾದ್, ಸೇಡಂ, ಮಹಾರಾಷ್ಟ್ರದ ತುಳಜಾಪುರ, ಸೋಲಾಪುರ, ವಚ್ಚಾದಲ್ಲಿ ಕೃಷಿ ಹಾಗೂ ಕೃಷಿಯೇತರ ಜಮೀನು, ನಿವೇಶನಗಳನ್ನು ಹೊಂದಿದ್ದಾರೆ.

2019ರಲ್ಲಿ ಸ್ಪರ್ಧಿಸಿದ ಚುನಾವಣೆಯಲ್ಲಿ ಅವರೇ ಘೋಷಿಸಿಕೊಂಡಂತೆ ₹1.02 ಕೋಟಿ ಸಾಲ ಇತ್ತು. ಜಮೀನು, ನಿವೇಶನ ಸೇರಿದಂತೆ ಸುಮಾರು ₹10 ಕೋಟಿಗೂ ಅಧಿಕ ಸ್ಥಿರಾಸ್ತಿ ಹಾಗೂ ಚರಾಸ್ತಿ ತೋರಿಸಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago