ಬೀದರ್: ರಾಜ್ಯದ ಪ್ರಗತಿಗೆ ಪೂರಕವಾದ ಹಾಗೂ ಎಲ್ಲ ವರ್ಗದವರಿಗೆ ನ್ಯಾಯ ಒದಗಿಸುವ, ರಾಜ್ಯದ ಅಭಿವೃದ್ಧಿಯನ್ನು ಬಿಂಬಿಸುವ ಬಜೆಟ್ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದಾರೆ.
ರಾಷ್ಟ್ರದ ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಿರುವುದು ರೈತ ಸಮುದಾಯದ ಅಭಿವೃದ್ದಿಗೆ ಸಹಾಯಕ ವಾಗಲಿದೆ. ರೈತರಿಗೆ ನೀಡಲಾಗುತ್ತಿದ್ದ ₹3 ಲಕ್ಷ ಬಡ್ಡಿ ರಹಿತ ಸಾಲ ₹5 ಲಕ್ಷ ರೂಪಾಯಿಗೆ ಹೆಚ್ಚಳ ಹಾಗೂ ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ರೈತರಿಗೆ ₹10 ಸಾವಿರ ಸಹಾಯಧನ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ಖರೀದಿಗೆ ಅನುಕೂಲ.
ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್, 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್. ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ ‘ವಿದ್ಯಾವಾಹಿನಿ’ ಯೋಜನೆ ಅಡಿಯಲ್ಲಿ ₹350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ, ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ. ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ದಾಖಲಾಗುವವರಿಗೆ ಶುಲ್ಕ ವಿನಾಯಿತಿ.
ಗ್ರಾಮ ಪಂಚಾಯ್ತಿ ಸದಸ್ಯರು, ಅತಿಥಿ ಶಿಕ್ಷಕರು, ಗ್ರಂಥಾಲಯ ಸಿಬ್ಬಂದಿ, ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಸಹಾಯಕರ ಗೌರವ ಧನ ₹1000 ಹೆಚ್ಚಳವಾಗಿ ನೀಡಲಾಗಿದ್ದು ದೇಶದ ಸರ್ವೋತೋಮುಖ ಅಭಿವೃದ್ದಿಗೆ ಕೇಂದ್ರ ಬಜೆಟ್ ಪೂರಕವಾಗಿ ನೆರವಾಗಲಿದೆ ಎಂದು ಕೆಎಸ್ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ತಿಳಿಸಿದ್ದಾರೆ.