ಬೀದರ್: ಮಾನಸಿಕ ಕ್ಷೋಭೆಯೋ, ಕೌಟುಂಬಿಕ ಹಿಂಸೆಯೋ, ಬದುಕೇ ಭಾರವಾದ ಹತಾಶೆಯೋ ಗೊತ್ತಿಲ್ಲ.. ತಾಯಿಯೊಬ್ಬಳು ತನ್ನ ಇಬ್ಬರು ಕರುಳ ಕುಡಿಗಳಿಗೆ ವಿಷ ಉಣಿಸಿ ತಾನು ನೇಣಿಗೆ ಶರಣಾಗಿದ್ದಾಳೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿ ನಿಲಮನಳ್ಳಿ ತಾಂಡದಲ್ಲಿ ಈ ಘಟನೆ ನಡೆದಿದೆ.
25 ವರ್ಷದ ಮೀರಾಬಾಯಿ ತನ್ನ ಮೂರು ಮತ್ತು ಎರಡು ವರ್ಷದ ಮಕ್ಕಳಾದ ನಚ್ಚುಬಾಯಿ ಮತ್ತು ಗೋಲುಬಾಯಿಗೆ ವಿಷ ಉಣಿಸಿದ್ದಾರೆ. ಅವೆರಡೂ ನಿದ್ದೆಯಲ್ಲೇ ಉಸಿರು ನಿಲ್ಲಿಸುತ್ತಿದ್ದಂತೆಯೇ ಮೀರಾಬಾಯಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ತಾಯಿಯ ಈ ಅತಿರೇಕದ ಕ್ರಮಕ್ಕೆ ಕೌಟುಂಬಿಕ ಕಲಹ ಕಾರಣ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಧನ್ನೂರು ಪೊಲೀಸರು ದೌಡಾಯಿಸಿದ್ದಾರೆ. ಗಂಡನ ಮನೆಯವರ ಹಿಂಸೆ, ಮಾನಸಿಕ ಒತ್ತಡ ತಡೆಯಲಾಗದೆ ಮೀರಾಬಾಯಿ ಈ ಕೃತ್ಯ ನಡೆಸಿದ್ದಾರೆ ಎಂಬ ಮಾತು ಪರಿಸರದಲ್ಲಿ ಕೇಳಿಬರುತ್ತಿದೆ. ಪೊಲೀಸರು ಈ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು