Categories: ಬೀದರ್

ಬೀದರ್ – ಬೆಂಗಳೂರು ವಿಮಾನ ಸೇವೆ ಸಮಯ ಬದಲಾವಣೆ

ಬೀದರ್‌: ಬೀದರ್‌ ಜನತೆಯ ಮಹಾದಾಸೆಯಂತೆ, ಬೀದರ್‌-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯ ಸಮಯ ಬದಲಾವಣೆ ಮಾಡಿಸಿದ್ದೇನೆ. ಎಲ್ಲಾ ಜನರು ಈ ಸಮಯ ಬದಲಾವಣೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕೇಂದ್ರ ಸಚಿವ ಭಗವಂತ ಖೂಬಾ ಜನರಲ್ಲಿ ಕೋರಿದ್ದಾರೆ.

ಸದ್ಯ ಬೀದರ್‌ನಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಂಗಳೂರಿನಿಂದ ಬೆಳಗ್ಗೆ 8.05 ಗಂಟೆಗೆ ಹೊರಟು ಬೆಳಗ್ಗೆ 9.15ಕ್ಕೆ ಬೀದರ್‌ ತಲುಪಲಿದೆ ಮತ್ತೆ ಬೆ. 9.40ಕ್ಕೆ ಬೀದರ್‌ನಿಂದ ಹೊರಟು ಬೆಳಗ್ಗೆ 10.45ಕ್ಕೆ ಬೆಂಗಳೂರು ತಲುಪಲಿದೆ.

ಉಳಿದ ನಾಲ್ಕು ದಿನಗಳು ಮಂಗಳವಾರ, ಗುರುವಾರ, ಶನಿವಾರ ಮತ್ತು ರವಿವಾರದಂದು ಎಂದಿನಂತೆ ಸಾಯಂಕಾಲ 4.20ಕ್ಕೆ ಬಂದು ಸಾ. 4.45ಕೆ ಹೊರಟು ಸಾ. 5.50ಕ್ಕೆ ಬೆಂಗಳೂರು ತಲುಪಲಿದೆ ಎಂದು ತಿಳಿಸಿದ್ದಾರೆ.

ಆದಷ್ಟು ಬೇಗ ವಾರಪೂರ್ತಿ ಬೆಳಿಗ್ಗೆ ಹೊರಡುವ ಹಾಗೆ ವ್ಯವಸ್ಥೆ ಮಾಡುತ್ತೇನೆ ಮತ್ತು ಬೀದರ್‌ನಿಂದ ದೇಶದ ಬೇರೆ ನಗರಗಳಿಗೆ ವಿಮಾನಯಾನ ಸೇವೆ ಪ್ರಾರಂಭಿಸುವ ನಿಟ್ಟಿನಲ್ಲಿ ಈಗಾಗಲೆ ಬೇರೆ ಬೇರೆ ವಿಮಾನಯಾನ ಸಂಸ್ಥೆಗಳೊಂದಿಗೆ ಮಾತುಕತೆ ನಡೆಯುತ್ತಿದೆ, ಶೀಘ್ರದಲ್ಲಿ ಬೀದರ್‌ನಿಂದ ಹೊಸ ವಿಮಾನಯಾನ ಸೇವೆಯೂ ಜನತೆಗೆ ಲಭ್ಯವಾಗಲಿದೆ ಎಂದು ಸಚಿವರು ಜನತೆಗೆ ತಿಳಿಸಿದ್ದಾರೆ.

Ashika S

Recent Posts

ʻಮಹಾನಟಿ’ ತಂಡದ ವಿರುದ್ಧ ದೂರು ದಾಖಲು..!

ಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ, ರಮೇಶ್​ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ.

10 mins ago

ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ…

24 mins ago

ಫಾದರ್‌ ಮುಲ್ಲರ್‌ ವೈದ್ಯಕೀಯ ಕಾಲೇಜಿನಲ್ಲಿ ಮೂಳೆ ಚಿಕಿತ್ಸೆಯಲ್ಲಿನ ಆಧುನಿಕ ತಂತ್ರಜ್ಞಾನ ಪ್ರದರ್ಶನ

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗವು ಒಂದು ದಿನದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿ ಆರ್ತ್ರೋಸ್ಕೊಪಿ ಬಗೆಗಿನ…

33 mins ago

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ.…

46 mins ago

ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…

1 hour ago

ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳ ದಾರುಣ ಸಾವು

ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ.…

1 hour ago