ಹುಲಸೂರ: ಪಟ್ಟಣದ ಅಂತರ ಭಾರತಿತಾಂಡ ಹೊರವಲಯದ ಚಂದ್ರಕಾಂತ ಬಸಪ್ಪಾ ಡೆಟ್ನೆ ಅವರ ಜಾಗದಲ್ಲಿ ತೆರೆದ ಬಾವಿಗೆ ಬಿದ್ದಿದ್ದ ಜಿಂಕೆಯನ್ನು ಅಗ್ನಿಶಾಮಕ ಸಿಬ್ಬಂದಿ ಬುಧವಾರ ಮಧ್ಯಾಹ್ನ ರಕ್ಷಿಸಿದ್ದಾರೆ.
ಮಂಗಳವಾರ ಸಂಜೆ 6 ಗಂಟೆಗೆ ಸಮೀಪದ ಅರಣ್ಯ ಪ್ರದೇಶದಿಂದ ಬಂದಿದ್ದ ಜಿಂಕೆ 2 ಅಡಿ ನೀರಿದ್ದ 40 ಅಡಿ ಆಳದ ಬಾವಿಗೆ ಬಿದ್ದಿದೆ.
ಇದನ್ನು ಗಮನಿಸಿದ ಚಂದ್ರಕಾಂತ ಬಸಪ್ಪಾ ಡೆಟ್ನೆ ಎಂಬುವವರು ಕೂಡಲೇ ಅಗ್ನಿಶಾಮಕ ಠಾಣೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಯ ಸಿಬ್ಬಂದಿಗೆ ಒಪ್ಪಿಸಿದರು.
ಜಿಂಕೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳಿಗೆ ತಹಶೀಲ್ದಾರ ಶಿವಾನಂದ ಮೇತ್ರಿ ಅವರು ಪ್ರಶಂಸಾ ಪತ್ರ ನೀಡಿದರು.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಪ್ರವೀಣ ಕಲಷೆಟ್ಟೆ, ಉಪ ವಲಯ ಅರಣ್ಯ ಅಧಿಕಾರಿ ಸಂತೋಷ ಯಾಚೆ, ಸಿಬ್ಬಂದಿ ಶಿವಕುಮಾರ, ಸೋಮನಾಥ , ಶಿವರಾಜ, ಮಲ್ಲಿಕಾರ್ಜುನ, ರಾಮಪ್ರಸಾದ ಸಿಬ್ಬಂದಿಗಳು ಭಾಗವಹಿಸಿದ್ದರು