News Karnataka Kannada
Thursday, May 02 2024
ಬೀದರ್

ಬೀದರ್: ಆಯುಕ್ತರಿಂದ ಮತಗಟ್ಟೆಗಳ ಪರಿಶೀಲನೆ

ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದಲ್ಲಿ ಶನಿವಾರ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ವಿವಿಧ ಮತಗಟ್ಟೆಗಳ ಪರಿಶೀಲನೆ ನಡೆಸಿದರು.
Photo Credit : NewsKarnataka

ಚಿಟಗುಪ್ಪ: ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದಲ್ಲಿ ಶನಿವಾರ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ವಿವಿಧ ಮತಗಟ್ಟೆಗಳ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ‘ಮತದಾರರಿಗೆ ಸರದಿ ಸಾಲಿನಲ್ಲಿ ನಿಂತಾಗ ನೆರಳು ಇರುವಂತೆ ಶಾಮಿಯಾನ, ಕುಡಿಯುವ ನೀರು, ಮತಗಟ್ಟೆ ಆವರಣದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಬೇಕು.

ಅಂಗವಿಕಲರಿಗೆ ಚಕ್ರದ ಖುರ್ಚಿ ಮತಗಟ್ಟೆಯಲ್ಲಿ ಲಭ್ಯವಿರಬೇಕು’ ಎಂದು ಸೂಚಿಸಿದರು.

ಬಿಎಲ್‌ಒಗಳಾದ ಶಂಕರ್, ಶಿವಕುಮಾರ್, ನಾಗಶೆಟ್ಟಿ, ಕಲ್ಲಪ್ಪ ಅವರು ಮತಗಟ್ಟೆಗಳ ಹಾಗೂ ಮತದಾರರ ಬಗ್ಗೆ ಸಂಖ್ಯೆವಾರು ಮಾಹಿತಿಯನ್ನು ಅಧಿಕಾರಿಗೆ ನೀಡಿದರು ಹಾಗೂ ಇದುವರೆಗೂ ಕೈಗೊಂಡ ವ್ಯವಸ್ಥೆ ಕುರಿತು ವಿವರಿಸಿದರು.

ತಹಶೀಲ್ದಾರ್‌ ರವೀಂದ್ರ ದಾಮಾ, ಕಂದಾಯ ನಿರೀಕ್ಷಕ ಮಹೇಶ್‌ಕುಮಾರ್, ಗ್ರಾಮ ಲೆಕ್ಕಿಗ ವಿಠಲ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭಾಗ್ಯಜ್ಯೋತಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಪಂಚಾಯಿತಿ, ಕಂದಾಯ ಇಲಾಖೆಗಳ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು