News Karnataka Kannada
Saturday, May 18 2024
ಬೀದರ್

ಬೀದರ್: ಸಿಪಿಐ ಕಾರ್ಯಕರ್ತರಿಂದ ಜನಾಗ್ರಹ ಚಳವಳಿ

Bidar: CPI launches janagraha agitation
Photo Credit : News Kannada

ಬೀದರ್: ಬಗರ್‌ ಹುಕುಂ ಸಾಗುವಳಿದಾರರನ್ನು ಸಕ್ರಮಗೊಳಿಸುವುದು, ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಿಪಿಐ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಅನಂತರ ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ನಿವೇಶನ ರಹಿತರಿಗೆ ನಿವೇಶನ ಕೊಡಬೇಕು. ಅರಣ್ಯ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆಯಬೇಕು. 371(ಜೆ) ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ನರೇಗಾ ಕೂಲಿ ಕಾರ್ಮಿಕರ ಆನ್‌ಲೈನ್‌ ಹಾಜರಾತಿ ರದ್ದುಪಡಿಸಬೇಕು. ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆ ಕಾಯಂಗೊಳಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಬಾಬುರಾವ ಹೊನ್ನ, ಎಂ.ಡಿ. ಶಫಾಯತ ಅಲಿ, ಅಲಿ ಅಹಮ್ಮದ್‌ ಖಾನ್‌, ನಜೀರ ಅಹಮ್ಮದ್‌, ಗುರುಪಾದಯ್ಯ ಸ್ವಾಮಿ, ಮೌಲಾನಾ, ಪ್ರಭು ಹೊಚಕನಳ್ಳಿ, ಸುನೀಲ ವರ್ಮಾ, ಪ್ರಭು ತಗಣಿಕರ, ಶಿವರಾಜ ಕಮಠಾಣ, ರಾಮಣ್ಣಾ ಅಲಮಾಸಪೂರ, ಪ್ರಭು ತಗಣಿಕರ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು