News Karnataka Kannada
Thursday, May 02 2024
ಬೀದರ್

ಬೀದರ್‌: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಗೆ ಆಗ್ರಹ

Bidar: Demand for service security for guest lecturers
Photo Credit : News Kannada

ಬೀದರ್‌: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ 15 ವರ್ಷಗಳಿಂದ 12,500ಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರು ಕಡಿಮೆ ಸಂಬಳದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಶೇ 20ರಷ್ಟು ಕಾಯಂಗೊಂಡಿದ್ದಾರೆ. ಉಳಿದವರಿಗೆ ಯಾವುದೇ ಸೇವಾ ಭದ್ರತೆ ಇಲ್ಲ. ರಜೆ ಸೌಲಭ್ಯಗಳಿಲ್ಲ. ಪ್ರತಿ ವರ್ಷ ನೇಮಕ ಮಾಡಿಕೊಳ್ಳುವುದರಿಂದ ಯಾವುದೇ ಭದ್ರತೆ ಇಲ್ಲ ಎಂದು ಅತಿಥಿ ಉಪನ್ಯಾಸಕರ ಒಕ್ಕೂಟದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಸಿಂಧೆ, ಮನವಿಯಲ್ಲಿ ಗೋಳು ಬಿಚ್ಚಿಟ್ಟಿದ್ದಾರೆ.

ಸೇವೆ ಕಾಯಂಗೊಳಿಸುವ ಭರವಸೆ ಸರ್ಕಾರ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಸಹ ಈಡೇರಿಸಿಲ್ಲ. ಬಹಳ ಸಂಕಷ್ಟದಲ್ಲಿ ಅತಿಥಿ ಉಪನ್ಯಾಸಕರು ಜೀವನ ನಡೆಸುತ್ತಿದ್ದಾರೆ. ಪರಿಸ್ಥಿತಿ ಅರ್ಥ ಮಾಡಿಕೊಂಡು ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

ನಗರದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ರ್‍ಯಾಲಿ ಭಗತ್‌ ಸಿಂಗ್‌ ವೃತ್ತ, ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತ, ಶಿವಾಜಿ ವೃತ್ತದ ಮೂಲಕ ಹಾದು ಜಿಲ್ಲಾಧಿಕಾರಿ ಕಚೇರಿ ಸಮೀಪ ಕೊನೆಗೊಂಡಿತು. ನಂತರ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು