ಬೀದರ್: ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ 14 ಪ್ರಕರಣಗಳನ್ನು ಭೇದಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮಗೋಸ್ತಿ ನಡೆಸಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟೆ, ಒಟ್ಟು ಐದು ಪೊಲೀಸ್ ಠಾಣೆಯ 14 ಪ್ರಕರಣಗಳನ್ನ ಪೊಲೀಸರು ಭೇದಿಸಿದ್ದಾರೆ.
ಜಿಲ್ಲೆಯ ಹುಮನಾಬಾದ್ ಪೊಲೀಸ ಠಾಣೆ, ಬೀದರ್ ಗಾಂಧಿಗಂಜ್ ಪೊಲೀಸ್ ಠಾಣೆ, ಔರಾದ್ ಪೊಲೀಸ್ ಠಾಣೆ, ಬಸವಕಲ್ಯಾಣ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚಣೆ ಮಾಡಿದ ಪೊಲೀಸರು ಒಟ್ಟು 53 ಲಕ್ಷದ 37 ಸಾವಿರದ 700 ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದರಲ್ಲಿ 50 ಬೈಕ್, 10 ತೊಲೆ ಬಂಗಾರ, 310ಗ್ರಾಮ ಬೆಳ್ಳಿ, 9 ಬಾವಿಗಳ ಮೋಟಾರ್ ಸೇರಿದೆ. ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಜನ ಆರೋಪಿಗಳಿಗೆ ಬಂಧನ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ವೇಳೆ ಅಪರಾಧ ಪ್ರಕರಣ ಭೇದಿಸಿದ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತವರ ತಂಡಕ್ಕೆ ನಗದು ಬಹುಮಾನ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ .ಎಸ್ ಎಲ್. ಸನ್ಮಾನಿಸಿದರು.