ಬೀದರ್: ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳಮಾಡಿ ವಿವಿಧ ಸಮುದಾಯಗಳ ಬೇಡಿಕೆಗಳನ್ನು ರಾಜ್ಯದ ಜನಪ್ರೀಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಡೇರಿಸುವ ಮೂಲಕ ಎಲ್ಲಾ ವರ್ಗದವರಿಗೆ ಯುಗಾದಿಯ ಕೊಡುಗೆಯನ್ನು ನೀಡಿದ್ದಾರೆ, ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮ ಮಂಡಳಿ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಅವರು ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.
ಹೊಸ ಮೀಸಲಾತಿಯಂತೆ 2-ಡಿ, ವೀರಶೈವ ಲಿಂಗಾಯತ ಸಮುದಾಯ ಮೀಸಲಾತಿ ಶೇ. 5 ರಿಂದ 7ಕ್ಕೆ ಹಾಗೂ 2-ಸಿ, ಒಕ್ಕಲಿಗ ಸಮುದಾಯದ ಮೀಸಲಾತಿ ಶೇ. 4ರಿಂದ 6ಕ್ಕೆ ಏರಿಕೆ ಮಾಡಿರುವುದು ಅಭಿನಂದನಾರ್ಹವಾಗಿದೆ.
ಇದರೊಂದಿಗೆ ಪರಿಶಿಷ್ಟ ಜಾತಿಗಳಿಗೆ ಎಡಗೈ ಸಮುದಾಯಗಳಿಗೆ ಶೇ 6 ಬಲಗೈ ಸಮುದಾ ಯಗಳು ಶೇ 5.5 ರಷ್ಟು ಭೋವಿ, ಬಂಜಾರಾ ಸಮುದಾಯಗಳಿಗೆ ಶೇ 4.5 ಮತ್ತು ಅಲೆಮಾರಿ, ಸಣ್ಣ ಸಮುದಾಯಗಳಿಗೆ ಶೇ.1 ರಷ್ಟು ಒಳ ಮೀಸಲಾತಿ ನೀಡಿರುವುದು ಐತಿಹಾಸಿಕ ಕ್ರಮವಾಗಿದೆ, ಯಾರೋಬ್ಬ ಮುಖ್ಯಮಂತ್ರಿಗಳು ಮಾಡಿರದ ಸಾಧನೆ ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದಾರೆ ಎಂದು ಕೆಎಸ್ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಹರ್ಷ ವ್ಯಕ್ತಪಡಿಸಿದ್ದಾರೆ.