ಬೀದರ್: ಬೀದರ್ ನಗರದ ಐತಿಹಾಸಿಕ ಮಹಮದ್ ಗವಾನ್ ಮದರಸಾದಲ್ಲಿ ಹಿಂದೂ ಕಾರ್ಯಕರ್ತರು ನುಗ್ಗಿ ಪೂಜೆ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಶುಕ್ರವಾರ ನಾಲ್ವರನ್ನು ಬಂಧಿಸಿದ್ದಾರೆ.
ಈ ಹಿಂದೆ ಪೊಲೀಸರ ನಿಷ್ಕ್ರಿಯತೆಯನ್ನು ಖಂಡಿಸಿ ಶುಕ್ರವಾರದ ಪ್ರಾರ್ಥನೆಯ ನಂತರ ಪ್ರತಿಭಟನೆಗೆ ಕರೆ ನೀಡಿದ್ದ ಮುಸ್ಲಿಂ ಸಂಘಟನೆಗಳು ಬಂಧನದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿವೆ.
ಎಫ್ಐಆರ್ನಲ್ಲಿ ಹೆಸರಿಸಲಾದ ಒಂಬತ್ತು ಆರೋಪಿಗಳ ಪೈಕಿ ಮುನ್ನಾ, ನರೇಶ್, ಯಲ್ಲಾಲಿಂಗ ಮತ್ತು ಪ್ರಕಾಶ್ ಅವರನ್ನು ಬಂಧಿಸಲಾಗಿದೆ. ಆದಾಗ್ಯೂ, ಪೊಲೀಸರು ಬೀದರ್ ಜಿಲ್ಲೆಯಲ್ಲಿ ಹೈ ಅಲರ್ಟ್ನಲ್ಲಿದ್ದಾರೆ ಮತ್ತು ಮಹಮದ್ ಗವಾನ್ ಮದರಸಾ ಮತ್ತು ಮಸೀದಿಯ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಘಟನೆಯ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
ಬೀದರ್ ನಲ್ಲಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಹಿಂದೂ ಕಾರ್ಯಕರ್ತರ ಗುಂಪೊಂದು ಬುಧವಾರ ರಾತ್ರಿ ಐತಿಹಾಸಿಕ ಮಹಮದ್ ಗವಾನ್ ಮದರಸಾದ ಆವರಣದೊಳಗೆ ನುಗ್ಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಗಳ ವಿರುದ್ಧ ಪ್ರತಿಭಟಿಸಿದ ಮುಸ್ಲಿಂ ಸಂಘಟನೆಗಳು ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿವೆ ಮತ್ತು ಶುಕ್ರವಾರದ ಪ್ರಾರ್ಥನೆಯ ನಂತರ ಬೃಹತ್ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದವು.