ಔರಾದ್: ತಾಲ್ಲೂಕಿನ ಗುಡಪಳ್ಳಿ ಗ್ರಾಮ ಪಂಚಾಯಿತಿ ಎಂಟು ವರ್ಷಗಳಲ್ಲಿ 2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.
ಮೊದಲು ಜೋಜನಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ ಗುಡಪಳ್ಳಿ ಗ್ರಾಮ 2015ರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿಯಾಗಿ ಅಸ್ತಿತ್ವಕ್ಕೆ ಬಂತು. ಹೊಸ ಪಂಚಾಯಿತಿ ಆದರೂ ಅಭಿವೃದ್ಧಿಯಲ್ಲಿ ಜಿಲ್ಲೆಗೆ ಮಾದರಿ ಎನಿಸಿದೆ. ಅಂದಿನ ಪಿಡಿಒ ಶಿವಾನಂದ ಔರಾದೆ ಅವರ ಅಭಿವೃದ್ಧಿ ಪರ ನಿಲುವಿನಿಂದ 2018-19ನೇ ಸಾಲಿನಲ್ಲಿಯೇ ಈ ಪಂಚಾಯಿತಿ ಗಾಂಧಿ ಗ್ರಾಮ ಪುರಸ್ಕಾರ ಪಡೆದು ಹೆಸರು ಮಾಡಿತ್ತು.
ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಗುಡಪಳ್ಳಿ, ಮೆಡಪಳ್ಳಿ, ಉಜನಿ ಹಾಗೂ ಗಾಂಧಿನಗರ ಗ್ರಾಮಗಳು ಬರುತ್ತವೆ. ದಶಕದ ಹಿಂದೆ ಈ ಊರಿಗೆ ಮೊಬೈಲ್ ಸಂಪರ್ಕ ಇರಲಿಲ್ಲ. ಮೂಲ ಸೌಲಭ್ಯಕ್ಕಾಗಿ ಜನ ಪರದಾಡುತ್ತಿದ್ದರು. ಹೊಸದಾಗಿ ಪಂಚಾಯಿತಿ ಆದ ನಂತರ ಸ್ವಲ್ಪ ಸುಧಾರಣೆಯಾಗಿದೆ ಎನ್ನುತ್ತಾರೆ ಗ್ರಾಮಸ್ಥರು.
ಸಂತೋಷ ಪಾಟೀಲ, ಪಿಡಿಒ, ಗುಡಪಳ್ಳಿ2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆಯುವುದು ಸುಲಭದ ಮಾತಲ್ಲ. ನಮ್ಮ ಪಂಚಾಯಿತಿ ಸದಸ್ಯರ ಸಹಕಾರ ಅಧಿಕಾರಿಗಳ ಪ್ರೋತ್ಸಾಹದಿಂದ ಇದು ಸಾಧ್ಯವಾಗಿದೆ.
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಿಂದ ಇಲ್ಲಿ ಅನೇಕ ಅಭಿವೃದ್ಧಿ ಕೆಲಸ ಆಗಿವೆ. ಗ್ರಾಮದ ಸರ್ಕಾರಿ ಶಾಲೆಗೆ ಕಾಂಪೌಂಡ್ ಗೋಡೆ, ಬಯಲು ರಂಗ ಮಂದಿರ, ರೈತರ ಹೊಲಗಳಿಗೆ ಹೋಗಲು ರಸ್ತೆ, ಜಾನುವಾರು ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣ ಸೇರಿದಂತೆ ಸುಮಾರು ₹ 2.30 ಕೋಟಿ ವೆಚ್ಚದ ಕಾಮಗಾರಿ ಆಗಿವೆ ಎನ್ನುತ್ತಾರೆ ಅಧಿಕಾರಿಗಳು.
ಈ ಊರಿನ ಡಿಜಿಟಲ್ ಗ್ರಂಥಾಲಯ ಗಮನ ಸೆಳೆದಿದೆ. ಸುಸಜ್ಜಿತ ಕಟ್ಟಡ, ಅದಕ್ಕೆ ಸೋಲಾರ್ ಬೆಳಕಿನ ವ್ಯವಸ್ಥೆ, ಸ್ಪರ್ಧಾತ್ಮಕ ಪರೀಕ್ಷೆ ಬೇಕಾದವು ಸೇರಿದಂತೆ 5 ಸಾವಿರ ಪುಸ್ತಕಗಳ ಸಂಗ್ರಹ. ಮಕ್ಕಳು ಕಂಪ್ಯೂಟರ್ ಬಳಸುವುದು ನೋಡಿದರೆ ನಿಜಕ್ಕೂ ಸಂತಸ ಎನಿಸುತ್ತದೆ ಎನ್ನುತ್ತಾರೆ ತಾಲ್ಲೂಕು ಪಂಚಾಯಿತಿ ಇಒ ಬೀರೇಂದ್ರಸಿಂಗ್ ಠಾಕೂರ್.
ಶಕುಂತಲಾ ರವೀಂದ್ರರೆಡ್ಡಿ, ಗುಡಪಳ್ಳಿ, ಗ್ರಾ.ಪಂ ಅಧ್ಯಕ್ಷೆನಮ್ಮ ಪಂಚಾಯಿತಿಗೆ ಗಾಂಧಿ ಗ್ರಾಮ ಪ್ರಶಸ್ತಿ ಸಿಕ್ಕಿದ್ದು ಸಂತಷವಾಗಿದೆ. ಇದು ನಮಗೆ ಇನ್ನಷು ಕೆಲಸ ಮಾಡಲು ಪ್ರೇರಣೆ ಸಿಕ್ಕಿದೆ.
ಉದ್ಯೋಗ ಖಾತರಿ ಜತೆಗೆ 15ನೇ ಹಣಕಾಸು ಯೋಜನೆ, ನಿಧಿ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿದ್ದೇವೆ. ಶಿಕ್ಷಣ, ಆರೋಗ್ಯ, ರೈತರ ಸ್ವಾವಲಂಬನೆಗಾಗಿಯೇ ಒತ್ತು ಕೊಟ್ಟು ಕೆಲಸ ಮಾಡಿದ ಕಾರಣ ನಮಗೆ ಗಾಂಧಿ ಗ್ರಾಮ ಪ್ರಶಸ್ತಿ ಲಭ್ಯವಾಗಿದೆ. ನಮ್ಮ ಆಡಳಿತ ಮಂಡಳಿ ಹಾಗೂ ಮೇಲಾಧಿಕಾರಿಗಳ ಸಹಕಾರವೂ ಇಲ್ಲಿ ಮುಖ್ಯವಾಗಿದೆ ಎಂದು ಪಿಡಿಒ ಸಂತೋಷ ಪಾಟೀಲ ಹೇಳುತ್ತಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…