ಬೀದರ್: ಮನೆಗೆ ಬೆಂಕಿ ತಗುಲಿ ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾಗಿರುವುದನ್ನು ಕಂಡ ಮನೆ ಯಜಮಾನಿಯ ರೋದನ ನೋಡುಗರ ಮನ ಕಲಕುವಂತಿತ್ತು.
ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದಲ್ಲಿರುವ ಬಸವರಾಜ್ ತಂದೆ ಅರ್ಜುನ್ ನಂದಗಾವ ಅವರ ಮನೆಗೆ ಬೆಂಕಿ ತಗುಲಿ ಜೋಳ, ಉಡುವ ಬಟ್ಟೆಬರೆ, ಹಣ ಮತ್ತು ಬಂಗಾರ- ಬೆಳ್ಳಿ ಸುಟ್ಟು ಕರಕಲಾಗಿವೆ . ಇವರೆಲ್ಲ ಕೂಲಿ ಕೆಲಸಕ್ಕಾಗಿ ಹೊರಗೆ ಹೋಗಿದ್ದರು.
ಮನೆಗೆ ಬೆಂಕಿ ತಗುಲಿದ್ದನ್ನು ನೋಡಿದ ಅಕ್ಕಪಕ್ಕದವರು ನೀರು ಹಾಕಿ ಬೆಂಕಿ ಆರಿಸಿದ್ದಾರೆ. ” ನಾವು ಕಡು ಬಡವರು. ನಮಗೆ ನಾಳೆ ಊಟ ಮಾಡಲು ಗತಿಯಿಲ್ಲ. ದಯವಿಟ್ಟು ನಮಗೆ ಸಹಾಯ ಮಾಡಿ. ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದೇವೆ.
ಮನೆಯಲ್ಲಿದ್ದ ಎಲ್ಲವೂ ಸುಟ್ಟು ಹೋಗಿವೆ . ಕೈ ಮುಗಿಯುತ್ತೇವೆ … ಸಹಾಯ ಮಾಡಿ ಎಂದು ಮನೆಮಂದಿ ಜನರನ್ನು ಬೇಡಿಕೊಳ್ಳುತ್ತಿರುವ ದೃಶ್ಯ ಅಯ್ಯೋ ಪಾಪ ಎನಿಸುವಂತಿತು.
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…
ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಐಯ್ಯರ್ ಹೇಳಿಕೆಗೆ…
2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…