News Karnataka Kannada
Friday, May 10 2024
ಬೀದರ್

ಬೀದರ್: ಮುಸ್ಲಿಂ ಮೀಸಲಾತಿ ಮುಂದುವರೆಸಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

Bidar: JD(S) holds protest demanding continuation of Muslim reservation
Photo Credit : News Kannada

ಬೀದರ್, ಮಾ.28: ಮುಸ್ಲಿಮರಿಗೆ 2 ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿರುವುದನ್ನು ವಿರೋಧಿಸಿ, ಮುಸ್ಲಿಂ ಮೀಸಲಾತಿ ಮುಂದುವರೆಸುವಂತೆ ಆಗ್ರಹಿಸಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಮುಖಂಡತ್ವದಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

ಬೀದರ್ ನಗರದ ಗಣೇಶ ಮೈದಾನದ ಬಳಿಯ ಜೆಡಿಎಸ್ ಜಿಲ್ಲಾ ಕಛೇರಿಯಿಂದ ಮಂಗಳವಾರ ಪ್ರತಿಭಟನೆ ಆರಂಭಿಸಿದ ಜೆಡಿಎಸ್ ನಾಯಕರು ಜಿಲ್ಲಾಧಿಕಾರಿ ಕಛೇರಿಯವರೆಗೆ ರ್ಯಾಲಿ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, 1995ರಲ್ಲಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಶೇ. 04% ಮೀಸಲಾತಿ ಕಲ್ಪಿಸಿದ್ದರು. ಅಂದಿನಿಂದ ಇಂದಿನವರೆಗೂ ಮೀಸಲಾತಿ ಸಿಗುತ್ತಿತ್ತು. ಈ ಬಿಜೆಪಿ ಸರ್ಕಾರ ಮೀಸಲಾತಿ ರದ್ದು ಮಾಡಿದೆ. ಬಿಜೆಪಿಯವರು ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಆ ಸಮುದಾಯಕ್ಕೆ ಮೋಸ ಮಾಡುತ್ತಿದ್ದಾರೆ.

ದೇವೇಗೌಡರು ಜಾರಿಗೊಳಿಸಿದ್ದ ಮೀಸಲಾತಿಯನ್ನು ಇವ್ರು ರದ್ದು ಮಾಡಿದ್ದಾರೆ. ಇದು ಖಂಡನಿಯವಾಗಿದೆ. ತಕ್ಷಣವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಅಲ್ಪಸಂಖ್ಯಾತರ ಮೀಸಲಾತಿ ರದ್ದು ಮಾಡಿರುವ ನಿರ್ಧಾರವನ್ನು ವಾಪಸು ತೆಗೆದುಕೊಳ್ಳಬೇಕು. ಮೊದಲಿನಂತೆಯೇ ಅಲ್ಪಸಂಖ್ಯಾತರ ಮೀಸಲಾತಿಯನ್ನು ಮುಂದುವರೆಸಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ್, ಪ್ರಮುಖರಾದ ಸಜ್ಜದ್ ಸಾಹೇಬ್, ಸಿಎಂ ಫೈಜ್, ಬಾಬಾ ಬುಕಾರಿ, ಐಲಿಂಜಾನ್ ಮಠಪತಿ, ಎಮ್.ಡಿ ಅಸೋದ್ದೀನ್, ಎಮ್.ಡಿ ನಬಿ ಖುರೇಷಿ, ರಾಜು ಕಡ್ಯಾಳ್, ಮಾರುತಿ ಬೌದ್ಧೆ, ಸೈಯದ್ ಸರ್ಪರಾಜ್ ಹಸ್ಮಿ, ಅಬ್ದುಲ್ ಸಮ್ಮದ್, ಇಸ್ಲಾಯಿಲ್ ಅಹಮದ್, ಸಂಗಮ್ಮ ವಿ ಪಾಟೀಲ್, ಲಲಿತಾ ಕರಂಜೆ, ವಸಿಮ್, ದೇವೇಂದ್ರ ಸೋನಿ, ಎಮ್.ಡಿ ಸಲಿಂ, ರಾಜಶೇಖರ ಜವಳೆ, ಸೈಖ್, ಸೈಯದ್ ಇಸ್ಮಾಯಿಲ್, ಶಮ್ಮಿ ಶೇಖ್, ಅಶೋಕ್ ಕೊಡ್ಗೆ, ಸೈಯದ್ ಬಿಲಾಲ್, ಮಿರಾಜ್ ಪೈಮ್ ಬೇಗ್ ಸೇರಿದಂತೆ ಅನೇಕರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು