News Karnataka Kannada
Monday, May 06 2024
ಬೀದರ್

ಬೀದರ್: ಸಂಭ್ರಮದ ಹನುಮ ದೇವರ ತೊಟ್ಟಿಲೋತ್ಸವ

ಹೋಬಳಿಯ ದಾಡಗಿ, ಡಾವರಗಾಂವ್ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮಂಗಳವಾರ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಪ್ರತಿ ಗ್ರಾಮದ ಆಂಜನೇಯನ ದೇವಸ್ಥಾನಗಳಲ್ಲಿ ಬಾಲ ಹನುಮನ ತೊಟ್ಟಿಲೋತ್ಸವ ಕಾರ್ಯಕ್ರಮ ನಡೆಯಿತು.
Photo Credit : NewsKarnataka

ಖಟಕಚಿಂಚೋಳಿ: ಹೋಬಳಿಯ ದಾಡಗಿ, ಡಾವರಗಾಂವ್ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಮಂಗಳವಾರ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಪ್ರತಿ ಗ್ರಾಮದ ಆಂಜನೇಯನ ದೇವಸ್ಥಾನಗಳಲ್ಲಿ ಬಾಲ ಹನುಮನ ತೊಟ್ಟಿಲೋತ್ಸವ ಕಾರ್ಯಕ್ರಮ ನಡೆಯಿತು.

ದೇವಸ್ಥಾನಗಳನ್ನು ಹೂಗಳಿಂದ ಅಲಂಕರಿಸಲಾಗಿತ್ತು. ಬೆಳಿಗ್ಗೆಯೇ ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಚಳಕಾಪುರ ಗ್ರಾಮದ ಪುರಾಣ ಪ್ರಸಿದ್ಧ ಹನುಮ ದೇವಸ್ಥಾನದಲ್ಲಿ ಬೆಳಿಗ್ಗೆಯೇ ತೊಟ್ಟಿಲೋತ್ಸವ ನಡೆಯಿತು. ಗ್ರಾಮಸ್ಥರು, ಸುತ್ತ ಮುತ್ತಲಿನ ಹಳ್ಳಿಗಳ ನೂರಾರು ಜನರು ಸರತಿ ಸಾಲಿನಲ್ಲಿ ನಿಂತು ಹನುಮನ ತೊಟ್ಟಿಲು ಕಾರ್ಯಕ್ರಮದಲ್ಲಿ  ಭಾಗಿಯಾಗಿ ಭಕ್ತಿ ಭಾವ ಮೆರೆದರು.

ಭಜನೆ, ಕೀರ್ತನೆ, ಹನುಮಾನ್ ಚಾಲೀಸಾ, ಧ್ಯಾನದ ಮೂಲಕ ದಿನವಿಡೀ ಹನುಮನ ಸ್ಮರಣೆ ಮಾಡಿದರು. ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ನೈವೇದ್ಯ, ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿತರಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು