ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜ.06ರಂದು ನಡೆದ ಪಂಚರತ್ನ ರಥಯಾತ್ರೆ ಯಶಸ್ವಿಗೊಳಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಕೃತಜ್ಞತೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಗಳಲ್ಲಿ ಭಾನುವಾರ ಪೋಸ್ಟ್ ಹಂಚಿಕೊಂಡಿರುವ ಅವರು, “ಆತ್ಮೀಯ ಬಂಧು ಮಿತ್ರರೇ ಮತ್ತು ನನ್ನೆಲ್ಲಾ ಪ್ರೀತಿಯ ಮುಖಂಡರುಗಳೆ, ಕಾರ್ಯಕರ್ತರೆ ನಿಮ್ಮಗಳ ಶ್ರಮದ ಫಲವಾಗಿ ಜನವರಿ 06ರಂದು ಶುಕ್ರವಾರ ನನ್ನ ಮತ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ಹಿರಿಯರಾದ ಸನ್ಮಾನ್ಯ ಹೆಚ್.ಡಿ ಕುಮಾರಣ್ಣರವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಸಿಎಂ ಇಬ್ರಾಹಿಂರವರು ಸೇರಿದಂತೆ ಪಕ್ಷದ ಹಿರಿಯರ ಸಮ್ಮುಖದಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ ಪಂಚರತ್ನ ರಥಯಾತ್ರೆಯ ಎರಡನೇ ದಿನದ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ನಡೆದಿದ್ದು, ತಮ್ಮೆಲ್ಲರ ಪ್ರೀತಿಗೆ ಸಾಷ್ಟಾಂಗ ನಮಸ್ಕಾರಗಳನ್ನು ಸಲ್ಲಿಸುತ್ತೇನೆ.
ಕಾರ್ಯಕ್ರಮದ ಯಶಸ್ವಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶ್ರಮಿಸಿದ ಸರ್ವರಿಗೂ ಈ ಮೂಲಕ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ. ನಿಮ್ಮ ಪ್ರೀತಿ ಅಭಿಮಾನ ಸದಾಕಾಲವೂ ಹೀಗೆ ಇರಲಿ. ಎಲ್ಲರೂ ಸೇರಿ ಕ್ಷೇತ್ರದ ಒಳಿತಿಗಾಗಿ ದುಡಿಯೋಣ. ಸರ್ವರಿಗೂ ಶುಭವಾಗಲಿ ಧನ್ಯವಾದಗಳು.” ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸಾಮಾಜಿಕ ಜಾಲತಾಣಗಳ ಮೂಲಕ ಕೃತಜ್ಞತಾ ಸಂದೇಶವನ್ನು ಹಂಚಿಕೊಂಡಿದ್ದಾರೆ.