ಬೀದರ್ : ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಪಲಾಪೂರ ಎ ಗ್ರಾಮದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಸುಮಾರು 17 ಲಕ್ಷ ರೂ. ಜಿಲ್ಲಾ ಪಂಚಾಯಿತಿ ಫಂಡ್ . 3.40 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾದ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕವನ್ನು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ ನಾನು ಉದ್ಘಾಟನೆ ಮಾಡುತ್ತಿರುವ ಮೊದಲನೆಯ ತ್ಯಾಜ್ಯ ವಿಲೇವಾರಿ ಘಟಕ ಇದಾಗಿದೆ. ಇದು ಉತ್ತಮ ಕಾರ್ಯವಾಗಿದೆ. ಪಂಚಾಯತಿಗೆ ಸಂಬಂಧಿಸಿದ ಪಿಡಿಒ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಾದವರು ಇದರ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಮತ್ತು ಮಾಹಿತಿ ನೀಡುವ ಕೆಲಸ ಮಾಡಬೇಕಾಗಿದೆ ಎಂದರು.
ಬಹಳ ಅಚ್ಚುಕಟ್ಟಾಗಿ ತ್ಯಾಜ್ಯ ವಿಲೇವಾರಿ ಘಟಕ ಮಾಡಲಾಗಿದೆ. ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲರೂ ಕೆಲಸ ಮಾಡಬೇಕಾಗಿರುತ್ತದೆ. ಗ್ರಾಮೀಣ ಭಾಗದ ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ, ಮಾಹಿತಿ ನೀಡುವ ಕೆಲಸ ಮಾಡಬೇಕಾಗುತ್ತದೆ. ನಿರ್ಮಾಣ ಮಾಡಿರುವುದು ಮೊದಲ ಹಂತವಾಗಿದೆ. ಅದನ್ನು ವಿಲೇವಾರಿ ಮಾಡುವುದು ಅತಿಮುಖ್ಯ ಕೆಲಸವಾಗಿರುತ್ತದೆ.
ಮಾದರಿ ಪಂಚಾಯತಿ ಮಾಡುವ ನಿಟ್ಟಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಹೆಚ್ಚಿನ ಗಮನಹರಿಸಬೇಕು. ಇದನ್ನು ಮಾದರಿ ಘಟಕವನ್ನಾಗಿ ಮಾಡುವ ಕೆಲಸ ನಿಮ್ಮಂದ ಆಗಲಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಅಧಿಕಾರಿಗಳಿಗೆ ಮತ್ತು ಸ್ಥಳೀಯ ಜನಪ್ರತಿನಿಧಿಗಳಿಗೆ ತಿಳಿಸಿದರು.
ಶಾಸಕ ಬಂಡೆಪ್ಪ ಖಾಶೆಂಪುರ್ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ. ನಾವು ಹಮ್ಮಿಕೊಂಡ ಯಾವ ಕಾರ್ಯಕ್ರಮಗಳಿಗೂ ಬಾರದೇ ತಪ್ಪಿಸಿಕೊಳ್ಳುವುದಿಲ್ಲ.
ಈಗ ನಿರ್ಮಿಸಲಾದ ತ್ಯಾಜ್ಯ ವಿಲೇವಾರಿ ಘಟಕವನ್ನು ಅವರು ಉದ್ಘಾಟಿಸಿರುವುದು ಸಂತಸದ ವಿಷಯವಾಗಿದೆ.
ಈ ತ್ಯಾಜ್ಯ ವಿಲೇವಾರಿ ಘಟಕವನ್ನು ಸದುಪಯೋಗ ಪಡೆಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಗ್ರಾಮದ ಮುಖಂಡ ಹಣುಮಂತರಾವ್ ಮೈಲಾರಿ ಹೇಳಿದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಈಶ್ವರಿ ಹಣುಂಮತರಾವ್ ಮೈಲಾರಿ, ಉಪಾಧ್ಯಕ್ಷೆ ಅರ್ಚನಾ ಮೇತ್ರೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಮಣಿ, ಜೆಇ ಸಂಜಯ್ ಪಾಟೀಲ್, ಮುಖಂಡರಾದ ಹಣುಮಂತರಾವ್ ಮೈಲಾರಿ, ಕಾಶಿನಾಥ್, ಶಿವಕುಮಾರ್ ಕೋಳಾರೆ, ಶಿವಕುಮಾರ್ ಬಿರ್ಗೆ, ಸತೀಶ್ ಸಿಖೇನಪೂರ್, ಬಸವರಾಜ ಮೊಲ್ಗೆ, ಸಂಜುಕುಮಾರ್ ಮಾಶೆಟ್ಟಿ, ಅಮೃತರಾವ್ ಮಾಶೆಟ್ಟಿ, ಗಂಗಾಧರ, ಮಹಮ್ಮದ್, ವಿಶ್ವನಾಥ ಪಾಟೀಲ್, ಚನ್ನಬಸವ, ವಿವೇಕಾನಂದ ಮುರ್ಗೆ, ಮಹಮ್ಮದ್ ಸೈಯದ್, ಭಗವಂತ ಚಾಂಬಾಳೆ ಸೇರಿದಂತೆ ಅಧಿಕಾರಿಗಳು, ಮುಖಂಡರು ಇದ್ದರು.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…