News Karnataka Kannada
Saturday, May 04 2024
ಬೀದರ್

ಬೀದರ್: ಪೆಟ್ರೋಲ್ ಟ್ಯಾಂಕ್ ಬ್ಲಾಸ್ಟ್, ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭಿರ ಗಾಯ

Bidar: One killed on the spot, two seriously injured in petrol tank blast
Photo Credit : News Kannada

ಹುಮನಾಬಾದ್: ತಾಲೂಕಿನ ಮಾಣಿಕನಗರ- ಕನಕಟ್ಟಾ ಗ್ರಾಮದ ರಸ್ತೆಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಓರ್ವ ಯುವಕ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ್ ಗ್ರಾಮದ ರೋಹಿತ್ ಮಾಣಿಕ್ (23) ಸ್ಥಳದಲ್ಲಿಯೇ ಮೃತಪಟ್ಟ ಯುವಕ. ಈತನ ಜೊತೆಗೆ ಇದ್ದ ಇನ್ನೂ ಇಬ್ಬರು ಶಿವಕುಮಾರ್ ಹಾಗೂ ಶ್ರೀಕಾಂತ್ ಗಂಭೀರ ಗಾಯಗೊಂಡಿದ್ದು, ಇವರ ಸ್ಥಿತಿ ಕೂಡ ಚಿಂತಾಜನಕವಾಗಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಭೀಕರ ಅಪಘಾತ ಕುರಿತು ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಹೇಗೆ ಅಪಘಾತ ಸಂಭವಿಸಿದೆ? ದ್ವಿಚಕ್ರ ವಾಹನಕ್ಕೆ ಹೇಗೆ ಬೆಂಕಿ ಹತ್ತಿಕೊಂಡಿತ್ತು ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವಾಹನವೊಂದು ಅತಿ ವೇಗದಲ್ಲಿ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಸಂಭವಿಸಿರಬೇಕು. ಅಪಘಾತದ ರಭಸಕ್ಕೆ ಮೃತಪಟ್ಟ ಯುವಕನ ರುಂಡ ಕೂಡ ಬೇರ್ಪಟ್ಟಿರಬೇಕು. ವಾಹನಕ್ಕೂ ಕೂಡ ಬೆಂಕಿ ಹೊತ್ತಿಕೊಂಡು ಬೈಕ್ ಸುಟ್ಟಿರಬೇಕು ಎಂದು ಪೊಲೀಸ್ ಅಧಿಕಾರಿಗಳು ಊಹಿಸುತ್ತಿದ್ದಾರೆ.

ಪೊಲೀಸ್ ಅಧಿಕಾರಿಗಳ ಹೆಚ್ಚಿನ ತನಿಖೆಯ ನಂತರ ಘಟನೆಯ ಪೂರ್ಣ ವಿವರ ಹೊರಬರಲಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು